ಆ್ಯಪ್ನಗರ

4ನೇ ಆರೋಪಿ ವಿರುದ್ಧ ತನಿಖೆಗೆ ‘ಹೈ’ ಸಮ್ಮತಿ

ಆ್ಯಂಬಿಡೆಂಟ್‌ ವಂಚನೆ ಪ್ರಕರಣದ ನಾಲ್ಕನೇ ಆರೋಪಿ ಎಸ್‌.ರಮೇಶ್‌ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್‌ ಒಪ್ಪಿಗೆ ಸೂಚಿಸಿದೆ.

Vijaya Karnataka 16 Dec 2018, 5:00 am
ಬೆಂಗಳೂರು: ಆ್ಯಂಬಿಡೆಂಟ್‌ ವಂಚನೆ ಪ್ರಕರಣದ ನಾಲ್ಕನೇ ಆರೋಪಿ ಎಸ್‌.ರಮೇಶ್‌ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್‌ ಒಪ್ಪಿಗೆ ಸೂಚಿಸಿದೆ.
Vijaya Karnataka Web high court allowed to investigate against s ramesh
4ನೇ ಆರೋಪಿ ವಿರುದ್ಧ ತನಿಖೆಗೆ ‘ಹೈ’ ಸಮ್ಮತಿ


ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಎಸ್‌.ರಮೇಶ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಪಿ.ಎಸ್‌.ದಿನೇಶ್‌ಕುಮಾರ್‌ ಅವರಿದ್ದ ನ್ಯಾಯಪೀಠ, ಹಿಂದೆ ನೀಡಿದ್ದ ಮಧ್ಯಾಂತರ ಆದೇಶ ತೆರವುಗೊಳಿಸಿ ಸಿಸಿಬಿ ಪೊಲೀಸರಿಗೆ ತನಿಖೆ ಮುಂದುವರಿಸುವಂತೆ ಸೂಚಿಸಿತು. ಆದರೆ, ಮುಂಚಿತ ನೋಟಿಸ್‌ ಜಾರಿ ಮಾಡಿದ ಬಳಿಕ ವಿಚಾರಣೆ ನಡೆಸಬೇಕು ಎಂದು ಸಿಸಿಬಿ ಪೊಲೀಸರಿಗೆ ಸೂಚಿಸಲಾಯಿತು.

ವಿಶೇಷ ಸರಕಾರಿ ಅಭಿಯೋಜಕ ಎ.ಎಸ್‌.ಪೊನ್ನಣ್ಣ ''ಅರ್ಜಿದಾರ ರಮೇಶ್‌ ಈಗಾಗಲೇ ಜಾಮೀನು ಪಡೆದಿರುವುದರಿಂದ ಅವರನ್ನು ಬಂಧಿಸುವುದಿಲ್ಲ. ಆದರೆ, ತನಿಖೆ ಕೈಗೆತ್ತಿಕೊಳ್ಳಲು ಅವಕಾಶ ನೀಡಬೇಕು,'' ಎಂದು ಮನವಿ ಮಾಡಿದರು.

ಪೊಲೀಸರಿಂದ ಕಿರುಕುಳ ಆರೋಪ? : ರಮೇಶ್‌ ಪರ ವಾದ ಮಂಡಿಸಿದ ವಕೀಲರು ''ವಿಚಾರಣೆ ನೆಪದಲ್ಲಿ ನನ್ನ ಕಕ್ಷಿದಾರನಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸದ ವಿವರಗಳನ್ನು ಕೆಲೆ ಹಾಕುವ ಯತ್ನ ಮಾಡಲಾಗಿದೆ. ಒಂದೇ ತಿಂಗಳಲ್ಲಿ ಆರು ಬಾರಿ ವಿಚಾರಣೆಗೆ ಕರೆಸಿದ್ದಾರೆ,,'' ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ