ಬೆಂಗಳೂರು: ಕೊರೊನಾ ಸಂಬಂಧಿ ವೈದ್ಯಕೀಯ ತ್ಯಾಜ್ಯವನ್ನು ಜೈವಿಕ ತ್ಯಾಜ್ಯ ನಿರ್ವಹಣಾ ನಿಯಮ-2016 ರ ಪ್ರಕಾರ ನಿರ್ವಹಣೆ ಮಾಡಲು ಪೌರ ಕಾರ್ಮಿಕರಿಗೆ ತರಬೇತಿ ನೀಡಲಾಗುತ್ತಿದೆಯೇ ಎಂಬ ಬಗ್ಗೆ ವಿವರಣೆ ನೀಡುವಂತೆ ಹೈಕೋರ್ಟ್ ಬಿಬಿಎಂಪಿಗೆ ಬುಧವಾರ ನಿರ್ದೇಶನ ನೀಡಿದೆ. ಕೊರೊನಾ ಸಂಬಂಧಿ ವೈದ್ಯಕೀಯ ತ್ಯಾಜ್ಯವನ್ನು ಜೈವಿಕವಾಗಿ ನಿರ್ವಹಣೆ ಮಾಡಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಕೊರೊನಾ ಸಂಬಂಧಿ ವೈದ್ಯಕೀಯ ತ್ಯಾಜ್ಯವನ್ನು ಜೈವಿಕ ತ್ಯಾಜ್ಯ ನಿರ್ವಹಣಾ ನಿಯಮ-2016ರ ಪ್ರಕಾರ ನಿರ್ವಹಣೆ ಮಾಡಬೇಕಿದೆ. ಜೈವಿಕ ತ್ಯಾಜ್ಯ ನಿರ್ವಹಣೆ ಕುರಿತಂತೆ ಪೌರ ಕಾರ್ಮಿಕರಿಗೆ ತರಬೇತಿ ನೀಡಬೇಕು. ಹಾಗಾಗಿ, ಪೌರ ಕಾರ್ಮಿಕರಿಗೆ ತರಬೇತಿ ನೀಡಲಾಗಿದೆಯೇ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಬೇಕು ಎಂದು ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಕೊರೊನಾ ಸಂಬಂಧಿ ವೈದ್ಯಕೀಯ ತ್ಯಾಜ್ಯವನ್ನು ಜೈವಿಕ ತ್ಯಾಜ್ಯ ನಿರ್ವಹಣಾ ನಿಯಮ-2016ರ ಪ್ರಕಾರ ನಿರ್ವಹಣೆ ಮಾಡಬೇಕಿದೆ. ಜೈವಿಕ ತ್ಯಾಜ್ಯ ನಿರ್ವಹಣೆ ಕುರಿತಂತೆ ಪೌರ ಕಾರ್ಮಿಕರಿಗೆ ತರಬೇತಿ ನೀಡಬೇಕು. ಹಾಗಾಗಿ, ಪೌರ ಕಾರ್ಮಿಕರಿಗೆ ತರಬೇತಿ ನೀಡಲಾಗಿದೆಯೇ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಬೇಕು ಎಂದು ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.