ಆ್ಯಪ್ನಗರ

ಸಚಿವೆ ಶಶಿಕಲಾ ಜೊಲ್ಲೆಗೆ ಜೀರೊ ಟ್ರಾಫಿಕ್‌ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಶಶಿಕಲಾ ಜೊಲ್ಲೆ ಅವರು ಆ. 4ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ 'ಜೀರೋ ಟ್ರಾಫಿಕ್‌'ನಲ್ಲಿ ಪ್ರಯಾಣ ಮಾಡಿದ್ದರು. ಈ ವ್ಯವಸ್ಥೆ ಕಲ್ಪಿಸಿದ ಕ್ರಮ ಪ್ರಶ್ನಿಸಿ ವಕೀಲ ಜಿ. ಬಾಲಾಜಿ ನಾಯ್ಡು ಪಿಐಎಲ್‌ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಅರ್ಜಿಯನ್ನು ವಜಾಗೊಳಿಸಿತು.

Vijaya Karnataka 8 Dec 2021, 11:58 am
ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ 'ಜೀರೋ ಟ್ರಾಫಿಕ್‌' ವ್ಯವಸ್ಥೆ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.
Vijaya Karnataka Web Shashikala Jolle


ಸಚಿವೆಯಾಗಿ ಪ್ರಮಾಣ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಶಿಕಲಾ ಜೊಲ್ಲೆ ಅವರು ಆ. 4ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ 'ಜೀರೋ ಟ್ರಾಫಿಕ್‌'ನಲ್ಲಿ ಪ್ರಯಾಣ ಮಾಡಿದ್ದರು. ಈ ವ್ಯವಸ್ಥೆ ಕಲ್ಪಿಸಿದ ಕ್ರಮ ಪ್ರಶ್ನಿಸಿ ವಕೀಲ ಜಿ. ಬಾಲಾಜಿ ನಾಯ್ಡು ಪಿಐಎಲ್‌ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಅರ್ಜಿಯನ್ನು ವಜಾಗೊಳಿಸಿತು.
ಜಾರಕಿಹೊಳಿ ಅಶ್ಲೀಲ ಸಿ.ಡಿ ಕೇಸ್‌ನ ವರ್ಚುವಲ್‌ ವಿಚಾರಣೆ ವೇಳೆ ಅರೆನಗ್ನವಾಗಿ ಕಾಣಿಸಿಕೊಂಡ ವ್ಯಕ್ತಿ; ನೋಟಿಸ್‌ ಜಾರಿ
ಸರಕಾರಿ ವಕೀಲರು ವಾದಿಸಿ, ನ್ಯಾಯಾಲಯದ ನಿರ್ದೇಶನದಂತೆ ಅರ್ಜಿಯನ್ನು ಸರಕಾರವು ಮನವಿಯಾಗಿ ಪರಿಗಣಿಸಿತ್ತು. ಆದರೆ, ಯಾವುದೇ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಅಥವಾ ಆಡಳಿತಾತ್ಮಕ ಅಧಿಕಾರ ದುರ್ಬಳಕೆ ಸಂಬಂಧ ಅರ್ಜಿದಾರರು ಸಾಕ್ಷ್ಯಾಧಾರಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಸರಕಾರಿ ವಕೀಲರ ಹೇಳಿಕೆ ದಾಖಲಿಸಿಕೊಂಡ ಪೀಠ, ಅರ್ಜಿ ಊರ್ಜಿತವಾಗುವುದಿಲ್ಲವೆಂದು ವಜಾಗೊಳಿಸಿತು.

ಸಂವಿಧಾನದ ಪ್ರಕಾರ ಶಾಸಕರೂ ಜನ ಸಾಮಾನ್ಯರಿಗೆ ಸಮಾನರಾಗಿರುತ್ತಾರೆ. ಪೊಲೀಸರಿಂದ ಸಂವಿಧಾನ ಪರಿಚ್ಛೇದ 15ರ ಉಲ್ಲಂಘನೆಯಾಗಿದೆ. ಜೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ