ಆ್ಯಪ್ನಗರ

ಸಾಮಾನ್ಯ ಪಟಾಕಿ ಮಾರಾಟ ಮಾಡಿದವರ ವಿರುದ್ಧ ಕ್ರಮ: ವಿವರಣೆ ಕೇಳಿದ ಹೈಕೋರ್ಟ್‌

ಬಿಬಿಎಂಪಿ ಪರ ವಕೀಲರು ದೀಪಾವಳಿ ವೇಳೆ ಪರವಾನಗಿ ಇಲ್ಲದೇ ಪಟಾಕಿ ಮಾರಾಟ ಮಾಡಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಅಲ್ಲದೆ, ಪಟಾಕಿ ಖರೀದಿ ಹಾಗೂ ಮಾರಾಟಕ್ಕೆ ಬಂದ ವೇಳೆ ಮಾಸ್ಕ್‌ ಹಾಕದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.

Vijaya Karnataka Web 22 Dec 2020, 6:38 am
ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಬದಲು ಸಾಮಾನ್ಯ ಪಟಾಕಿ ಮಾರಾಟ ಮಾಡಿದವರಿಗೆ ಯಾವ ಕಾನೂನಿನಡಿ ಕ್ರಮ ಜರುಗಿಸಲಾಗಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಹೈಕೋರ್ಟ್‌ ಸೋಮವಾರ ಬಿಬಿಎಂಪಿಗೆ ನಿರ್ದೇಶನ ನೀಡಿದೆ.
Vijaya Karnataka Web high court of karnataka


ವಾತಾವರಣ ವೈಪರೀತ್ಯದಿಂದ ನೆಲಕಚ್ಚಿದ ರಾಗಿ; ಯಂತ್ರಗಳಿಂದ ರಾಗಿ ಪೈರುಗಳಿಗೆ ಹಾನಿ, ದಾರಿ

ಕೊರೊನಾ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ಚಾರ್ಟರ್ಡ್‌ ಅಕೌಂಟೆಂಟ್‌ ಡಾ.ಎ.ಎಸ್‌. ವಿಷ್ಣುಭರತ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಬಿಬಿಎಂಪಿ ಪರ ವಕೀಲರು ದೀಪಾವಳಿ ವೇಳೆ ಪರವಾನಗಿ ಇಲ್ಲದೇ ಪಟಾಕಿ ಮಾರಾಟ ಮಾಡಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಅಲ್ಲದೆ, ಪಟಾಕಿ ಖರೀದಿ ಹಾಗೂ ಮಾರಾಟಕ್ಕೆ ಬಂದ ವೇಳೆ ಮಾಸ್ಕ್‌ ಹಾಕದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.

ಮಹಿಳೆ ಜೊತೆ ನಗ್ನವಾಗಿ ವಿಡಿಯೋ ಮಾಡಿಸಿ ಬ್ಲ್ಯಾಕ್‌ಮೇಲ್‌..! ಹನಿಟ್ರ್ಯಾಪ್‌ ಗ್ಯಾಂಗ್‌ನ ಒಬ್ಬ ಅರೆಸ್ಟ್‌..!

ಅದನ್ನು ಪರಿಗಣಿಸಿದ ನ್ಯಾಯಪೀಠ, ಯಾವ ಕಾನೂನಿನಡಿ ಎಫ್‌ಐಆರ್‌ ದಾಖಲಿಸಲಾಗಿದೆ ಹಾಗೂ ದಂಡ ವಿಧಿಸಲಾಗಿದೆ ಎಂಬುದರ ಕುರಿತು ವಿವರಣೆ ನೀಡಬೇಕು ಎಂದು ಪಾಲಿಕೆಗೆ ಸೂಚಿಸಿ ವಿಚಾರಣೆ ಮುಂದೂಡಿತು. ನ.23ರಂದು ವಿಚಾರಣೆ ನಡೆಸಿದ್ದ ನ್ಯಾಯಪೀಠ, ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನಷ್ಟೇ ಮಾರಾಟ ಮಾಡಲಾಗಿದೆಯೇ ಮತ್ತು ನಿಯಮ ಉಲ್ಲಂಘಿಸಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ಒದಗಿಸುವಂತೆ ರಾಜ್ಯ ಸರಕಾರ ಮತ್ತು ಬಿಬಿಎಂಪಿಗೆ ಸೂಚನೆ ನೀಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ