ಆ್ಯಪ್ನಗರ

ಜಕ್ಕೂರು ವಾಯುನೆಲೆ ಬಳಿ ಮೆಟ್ರೊ ಮಾರ್ಗ; ನಿಯಮ ಉಲ್ಲಂಘನೆ ಕುರಿತು ಮಾಹಿತಿ ನೀಡಲು ಡಿಜಿಸಿಎಗೆ ಹೈಕೋರ್ಟ್‌ ಸೂಚನೆ

ಜಕ್ಕೂರು ವಾಯುನೆಲೆ ಬಳಿ ಮೆಟ್ರೊ ರೈಲು ಮಾರ್ಗ ಯೋಜನೆ ಕೈಗೆತ್ತಿಕೊಂಡಿರುವುದರಿಂದ ಅಲ್ಲಿ ಕಟ್ಟಡ ನಿರ್ಮಾಣ ನಿರ್ಬಂಧ ಸೇರಿ ಯಾವುದಾದರೂ ನಿಯಮ ಉಲ್ಲಂಘನೆಯಾಗುತ್ತಿವೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್‌, ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ.

Vijaya Karnataka Web 25 Nov 2020, 7:05 am
ಬೆಂಗಳೂರು: ಜಕ್ಕೂರು ವಾಯುನೆಲೆ ಬಳಿ ಮೆಟ್ರೊ ರೈಲು ಮಾರ್ಗ ಯೋಜನೆ ಕೈಗೆತ್ತಿಕೊಂಡಿರುವುದರಿಂದ ಅಲ್ಲಿ ಕಟ್ಟಡ ನಿರ್ಮಾಣ ನಿರ್ಬಂಧ ಸೇರಿ ಯಾವುದಾದರೂ ನಿಯಮ ಉಲ್ಲಂಘನೆಯಾಗುತ್ತಿವೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್‌, ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರಿಗೆ(ಡಿಜಿಸಿಎ)ಗೆ ನಿರ್ದೇಶನ ನೀಡಿದೆ.
Vijaya Karnataka Web karnataka high court


ಸೋನಿಯಾ ಗಾಂಧಿ ಆಪ್ತರಾಗಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್‌ ಇನ್ನಿಲ್ಲ..!

ನಗರದ ವಕೀಲ ಅಜಯ್‌ ಕುಮಾರ್‌ ಪಾಟೀಲ್‌ ಸಲ್ಲಿಸಿದ್ದ ಪಿಐಎಲ್‌ ಕುರಿತು ವಿಚಾರಣೆ ನಡೆಸಿದ ಸಿಜೆ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯಪೀಠ, ಈ ನಿರ್ದೇಶನ ನೀಡಿ ವಿಚಾರಣೆಯನ್ನು ಡಿ.22ಕ್ಕೆ ಮುಂದೂಡಿತು. ಡಿಜಿಸಿಎ ಪರ ವಕೀಲರು, ಜಕ್ಕೂರು ವಾಯುನೆಲೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರದ ನಿಯಮಗಳ ಅನ್ವಯ ಮೆಟ್ರೊ ಕಾಮಗಾರಿಗೆ ಅನುಮತಿ ನೀಡಲಾಗಿದೆ.

ಸಿಗಂದೂರು ದೇವಾಲಯ ಅರಣ್ಯಭೂಮಿ ಒತ್ತುವರಿ ಪರಿಶೀಲನೆ ನಡೆಸಲು ಹೈಕೋರ್ಟ್

ಆ ವಾಯುನೆಲೆ ಡಿಜಿಸಿಎ ವ್ಯಾಪ್ತಿಗೆ ಬರುವುದಿಲ್ಲ, ಅದು ರಾಜ್ಯ ಸರಕಾರದ ಅಧೀನದಲ್ಲಿಯೇ ಇದೆ ಎಂದು ತಿಳಿಸಿದರು. ನ್ಯಾಯಾಲಯ ಕಳೆದ ಸೆ.29ರಂದು ಮುಂದಿನ ಆದೇಶದವರೆಗೆ ಪಿಲ್ಲರ್‌ ನಿರ್ಮಾಣ ಕಾಮಗಾರಿ ಆರಂಭಿಸದಂತೆ ಬಿಎಂಆರ್‌ಸಿಎಲ್‌ಗೆ ನಿರ್ದೇಶನ ನೀಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ