ಆ್ಯಪ್ನಗರ

ಸ್ಟೀಲ್‌ ಬ್ರಿಡ್ಜ್‌ ನಿರ್ಮಾಣಕ್ಕೆ ಮುನ್ನ ಪರಿಸರ ಇಲಾಖೆ ಅನುಮತಿ ಪಡೆಯಲಾಗುವುದು: ಅಡ್ವೊಕೇಟ್‌ ಜನರಲ್‌

ಯೋಜನೆ ಇನ್ನೂ ಪ್ರಸ್ತಾವ ಹಂತದಲ್ಲಿದೆ ಒಂದು ವೇಳೆ ಮಾಡಿದರೂ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಪರಿಸರ ಇಲಾಖೆ ಅನುಮತಿ ಪಡೆಯಲಾಗುವುದು ಎಂದಿದ್ದಾರೆ ಸರಕಾರದ ಪರ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ

Vijaya Karnataka Web 9 Jan 2019, 5:37 pm
ಬೆಂಗಳೂರು: ಮತ್ತೆ ಸದ್ದು ಮಾಡುತ್ತಿರುವ ಸ್ಟೀಲ್‌ ಬ್ರಿಡ್ಜ್‌ ನಿರ್ಮಾಣ ವಿಷಯ ಈಗ ಹೈಕೋರ್ಟ್ ಅಂಗಳದಲ್ಲಿ ಬಂದಿದ್ದು, ವಿಚಾರಣೆಯನ್ನು ಮುಂದಿನ ಜೂನ್‌ಗೆ ಮುಂದೂಡಲಾಗಿದೆ.
Vijaya Karnataka Web ಹೈಕೋರ್ಟ್‌
ಹೈಕೋರ್ಟ್‌


2016ರಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಪೀಠ, ವಾದ-ಪ್ರತಿವಾದಗಳನ್ನು ಆಲಿಸಿ ಜೂನ್‌ ತಿಂಗಳಿಗೆ ಮುಂದೂಡಿತು.

ಸರಕಾರದ ಪರ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ, ಯೋಜನೆ ಇನ್ನೂ ಪ್ರಸ್ತಾವ ಹಂತದಲ್ಲಿದೆ ಒಂದು ವೇಳೆ ಮಾಡಿದರೂ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಪರಿಸರ ಇಲಾಖೆ ಅನುಮತಿ ಪಡೆಯಲಾಗುವುದು ತಿಳಿಸಿದರು.

ಈ ಹಿಂದೆಯೇ ಎನ್ ಜಿ ಟಿ ನೀಡಿರುವ ತಡೆಯಾಜ್ಞೆ ಪ್ರಶ್ನಿಸಿ ಬಿಡಿಎ ಮತ್ತು ಸರಕಾರ ಯಾವುದೂ ಮೇಲ್ಮನವಿ ಸಲ್ಲಿಸಿಲ್ಲ.

ಆದರೆ ಈ ವಿಷಯ ಹೈಕೋರ್ಟ್‌ನಲ್ಲಿ ಪ್ರಸ್ತಾವವಾಗಿದೆ. ಆದರೆ ವಿಚಾರಣೆಯನ್ನು ಜೂನ್‌ಗೆ ಮುಂದೂಡಲಾಗಿದೆ.

ನಮ್ಮ ಬೆಂಗಳೂರು ಫೌಂಡೇಷನ್‌ ಪ್ರತಿಕ್ರಿಯೆ

ಸ್ಟೀಲ್‌ ಬ್ರಿಡ್ಜ್‌ ನಿರ್ಮಾಣ ವಿರೋಧಿಸುತ್ತಿರುವ ನಮ್ಮ ಬೆಂಗಳೂರು ಫೌಂಡೇಷನ್‌ ಈ ಕುರಿತು ಪ್ರತಿಕ್ರಿಯೆ ನೀಡಿದೆ.

ಸ್ಟೀಲ್‌ ಬ್ರಿಡ್ಜ್‌ ನಿರ್ಮಾಣಕ್ಕೆ ರಾಷ್ಟ್ರೀಯ ಹಸಿರು ಪ್ರಾಧಿಕಾರ ತಡೆಯಾಜ್ಞೆ ನೀಡಿದ್ದರೂ ರಾಜ್ಯ ಸರಕಾರ ಮತ್ತೆ ಈ ಯೋಜನೆ ಕೈಗೆತ್ತಿಕೊಳ್ಳಲು ಮುಂದಾಗಿದೆ. ಇದರ ಹಿಂದಿನ ಕಾರಣ ಅಥವಾ ಒಳಮರ್ಮದ ಬಗ್ಗೆ ನಮಗೆ ಗೊತ್ತಿಲ್ಲ. ಪರಿಸರ ತಜ್ಞರು, ಐಐಎಸ್‌ಸಿ ಸೇರಿದಂತೆ ಹಲವರು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಬೆಂಗಳೂರು ಅಭಿವೃದ್ಧಿ ಸಚಿವರು ಸ್ಟೀಲ್‌ ಬ್ರಿಡ್ಜ್‌ ಕಟ್ಟಲು ಉತ್ಸುಕತೆ ತೋರುತ್ತಿರುವುದು ಬೇಸರದ ಸಂಗತಿ ಎಂದು ನಮ್ಮ ಫೌಂಡೇಷನ್‌ನ ನಿರ್ದೇಕ ಎನ್‌.ಆರ್.‌ ಸುರೇಶ್‌ ತಿಳಿಸಿದ್ದಾರೆ.

ನಮ್ಮ ಉದ್ಯಾನನಗರಿ ಬೆಂಗಳೂರು ಉಳಿಸಿ ಅಭಿಯಾನಕ್ಕೆ ಕೈ ಜೋಡಿಸಿರುವ ಲಕ್ಷಾಂತರ ಮಂದಿಗೆ ನಿಜಕ್ಕೂ ಅಭಿನಂದನೆಗಳು. ಪರಿಸರಕ್ಕೆ ಹಾನಿಯಾಗುವ ಯೋಜನೆಗಳ ವಿರುದ್ಧ ಎಲ್ಲರೂ ದನಿ ಎತ್ತಬೇಕು ಎಂದು ಸುರೇಶ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ