ಆ್ಯಪ್ನಗರ

ಕಿದ್ವಾಯಿಯಲ್ಲಿ ರೇಡಿಯೊ ಥೆರಪಿ, ರೋಬೊಟಿಕ್‌ ಸರ್ಜರಿಗೆ ಅತ್ಯಾಧುನಿಕ ಯಂತ್ರ

ಕಿದ್ವಾಯಿ ಆಸ್ಪತ್ರೆಯಲ್ಲಿ ರೇಡಿಯೋಥೆರಪಿ ಹಾಗೂ ರೊಬೋಟಿಕ್ ಸರ್ಜರಿಗಳಲ್ಲಿ ಬಳಕೆಗಾಗಿ ಅತ್ಯಾಧುನಿಕ ಯಂತ್ರವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟಿಸಿದರು.

Vijaya Karnataka Web 28 Jun 2018, 12:38 pm
ಬೆಂಗಳೂರು: ಕಿದ್ವಾಯಿ ಆಸ್ಪತ್ರೆಯಲ್ಲಿ ರೇಡಿಯೋಥೆರಪಿ ಹಾಗೂ ರೊಬೋಟಿಕ್ ಸರ್ಜರಿಗಳಲ್ಲಿ ಬಳಕೆಗಾಗಿ ಅತ್ಯಾಧುನಿಕ ಯಂತ್ರವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟಿಸಿದರು.
Vijaya Karnataka Web kidwai.


90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ರಾಜ್ಯ ಕ್ಯಾನ್ಸರ್ ಸಂಸ್ಥೆಯ ನೂತನ ಕಟ್ಟಡದ ಉದ್ಘಾಟನೆ ಕೂಡ ನಡೆಯಿತು.

ಕ್ಯಾನ್ಸರ್ ಹೊಡೆದೋಡಿಸಲು ಸರಕಾರದ ಜತೆಗೆ ಸಾರ್ವಜನಿಕ ಸಂಸ್ಥೆಗಳು ಕೈಜೋಡಿಸಬೇಕು. ರೋಗ ಗುಣಪಡಿಸುವುದಕ್ಕಿಂತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬಡ ಜನರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ದೊರೆಯುವಂತಾಗಬೇಕು. ಕ್ಯಾನ್ಸರ್ ರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ಕಡ್ಡಾಯವಾಗಿ ರೋಗ ತಪಾಸಣೆಗೆ ಸರಕಾರ ಗಮನ ಹರಿಸಬೇಕು ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಲಹೆ ನೀಡಿದರು.

ರಾಜ್ಯದಲ್ಲಿ ಅಸ್ಥಿ ಮಜ್ಜೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ನೆರವಾಗಲು ಇದೇ ಬಜೆಟ್‌ನಲ್ಲಿ ಅನುದಾನ ನಿಗದಿ ಮಾಡಲಾಗುವುದು. ಈ ಸೌಲಭ್ಯವನ್ನು ಕಿದ್ವಾಯಿ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗುವುದು. ಆರೋಗ್ಯ ಸಂಬಂಧಿತ ಕಾರ್ಯಕ್ರಮಗಳಿಗೆ ಸರಕಾರ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.

ರಾಜ್ಯಪಾಲ ವಿ.ಆರ್.ವಾಲಾ, ಸಚಿವರಾದ ಡಿ.ಕೆ.ಶಿವಕುಮಾರ್, ಶಿವಾನಂದ ಪಾಟೀಲ್, ಶಾಸಕ ಉದಯ್ ಗರುಡಾಚಾರ್, ಸಂಸ್ಥೆಯ ನಿರ್ದೇಶಕ ಡಾ.ಲಿಂಗೇಗೌಡ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ