ಆ್ಯಪ್ನಗರ

ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ ಮನೆಗಳ ತೆರವಿಗೆ ಕ್ರಮ: ಬಸವರಾಜ ಬೊಮ್ಮಾಯಿ

ಕಳೆದ ಬಾರಿ ಎಲ್ಲ ನಾಯಕರ ಜೊತೆ ಸಭೆ ಮಾಡಿ ಕೆಲ ತೀರ್ಮಾನ ತೆಗೆದುಕೊಂಡಿದ್ದೆವು. ಎಲ್ಲ ಕಾಲುವೆಗಳನ್ನು ದುರಸ್ತಿ ಮಾಡುವುದಕ್ಕೆ 1600 ಕೋಟಿ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಡಿಪಿಆರ್ ಮಾಡಿ ಕೆಲಸ ಪ್ರಾರಂಭ ಮಾಡುತ್ತೇವೆ

Vijaya Karnataka Web 19 May 2022, 1:18 pm
ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ ಮನೆಗಳ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
Vijaya Karnataka Web ಬೊಮ್ಮಾಯಿ
ಬೊಮ್ಮಾಯಿ


ಬೆಂಗಳೂರು ನಗರ ಪ್ರದಕ್ಷಿಣೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಮುಖ್ಯ ಕಾಲುವೆಗಿಂತ ಕೆಳಗಡೆ ಮನೆ ಕಟ್ಟಿದಾಗಲೂ ಈ ಸಮಸ್ಯೆ ಆಗುತ್ತಿದೆ. ಅಕ್ರಮವಾಗಿ ಕಟ್ಟಡಗಳಿಂದಲೂ ಸಮಸ್ಯೆ ಆಗುತ್ತಿದೆ.‌ಈ ನಿಟ್ಟಿನಲ್ಲಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನಲ್ಲಿ ಮಳೆ ಅವಾಂತರ: ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್ ಆರಂಭ!

ಸಿಟಿ ರೌಂಡ್ಸ್ ಮೂಲಕ ಎಲ್ಲ ಕಡೆ ಭೇಟಿ ನೀಡಿದ್ದೇನೆ. ಈ ಬಾರಿ ಅಲ್ಪ ಅವಧಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಬಿದ್ದಿದೆ. ಇಷ್ಟು ಪ್ರಮಾಣದಲ್ಲಿ ಮಳೆ ಬಂದಿರುವುದರಿಂದ ಬಹಳಷ್ಟು ಜನರಿಗೆ ತೊಂದರೆ ಆಗಿದೆ. ಒಂದು ಲೆಕ್ಕಾಚಾರ ಪ್ರಕಾರ ಮೇ ತಿಂಗಳಲ್ಲಿ 15 ದಿನಗಳಲ್ಲಿ ಆಗಬೇಕಾದ ಮಳೆ ನಾಲ್ಕೈದು ತಾಸಲ್ಲಿ ಆಗಿದೆ. ಇದರಿಂದ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.

ಬೆಂಗಳೂರು ಮಳೆ ಅವಾಂತರ: ಹಾನಿ ಪರಿಶೀಲನೆಗೆ ಸಿಎಂ ಸಿಟಿ ರೌಂಡ್ಸ್

ಮಳೆ ನೀರು ನುಗ್ಗಿದ ಪರಿಣಾಮ ಸಮಸ್ಯೆಗೆ ಒಳಗಾಗಿರುವ ಸಂತ್ರಸ್ತರಿಗೆ ಒಂದು ವಾರದ ರೇಷನ್ ಹಾಗೂ ಊಟದ ವ್ಯವಸ್ಥೆ ಮಾಡಲು ಹೇಳಲಾಗಿದೆ ಎಂದು ತಿಳಿಸಿದ ಅವರು, ಕಳೆದ ಬಾರಿ ಎಲ್ಲ ನಾಯಕರ ಜೊತೆ ಸಭೆ ಮಾಡಿ ಕೆಲ ತೀರ್ಮಾನ ತೆಗೆದುಕೊಂಡಿದ್ದೆವು. ಎಲ್ಲ ಕಾಲುವೆಗಳನ್ನು ದುರಸ್ತಿ ಮಾಡುವುದಕ್ಕೆ 1600 ಕೋಟಿ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಡಿಪಿಆರ್ ಮಾಡಿ ಕೆಲಸ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ಎಲ್ಲೆಲ್ಲಿ ಹೂಳು ತುಂಬಿದೆ ಅದನ್ನು ನಿವಾರಣೆ ಮಾಡುವುದಕ್ಕೆ ಅನುಮತಿ ಕೊಟ್ಟಿದ್ದೇವೆ. ಡಿಸಿಲ್ಟಿಂಗ್ ಕೆಲಸ ಆಗಬೇಕಿದೆ. ರಾಜಕಾಲುವೆ ಪಕ್ಕದ ವಾರ್ಡ್ ಗಳಲ್ಲಿ ಕೆಲಸ ತಕ್ಷಣ ಪ್ರಾರಂಭ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ವೃಷಭಾವತಿ ವ್ಯಾಲಿಯಲ್ಲಿ ದೊಡ್ಡ ಕಲ್ಲುಗಳಿಂದ ನೀರು ತಡೆ ಹಿಡಿಯುತ್ತಿದೆ. ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಇದನ್ನು ತುರ್ತಾಗಿ ಮಾಡಲು ಸೂಚನೆ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ನಗರ ಅಭಿವೃದ್ಧಿ ಆಗುತ್ತಿದೆ. ಆದರೆ ಪ್ರವಾಹದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಎಸ್.ಟಿ.ಪಿ ಪ್ಲ್ಯಾಂಟ್ ಪ್ರಮಾಣ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. 100 ಎಲ್‌ಎಂಡಿ ಜತೆಗೆ ಹೊಸ 60 ಎಂಎಲ್ ಡಿ ಪ್ಲ್ಯಾಂಟ್ ಹಾಕಲು ಮುಖ್ಯಮಂತ್ರಿ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಯುವಕರು ಬೊಮ್ಮಾಯಿಗೆ ಈಜೋಣ ಬನ್ನಿ ಅಂತಾ ಕರೆಯುತ್ತಿದ್ದಾರೆ: ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯ
ಬೆಂಗಳೂರು ಮಳೆ ಹಾನಿ ಹಿನ್ನೆಲೆಯಲ್ಲಿ ಬ್ರಾಂಡ್ ಕಳೆದುಕೊಳ್ಳುತ್ತಿರುವ ಬಗ್ಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಸಲಹೆಗೆ ಪ್ರತಿಕ್ರಿಯೆ ನೀಡಿದ ಅವರು, ಎಸ್ ಎಂ ಕೃಷ್ಣ ಸಲಹೆಯನ್ನು ಪರಿಗಣಿಸುತ್ತೇವೆ. ಇದೀಗ ಸವಾಲು ಹೆಚ್ಚಾಗಿದೆ. ಹೊಸ ಹೊಸ ಸವಾಲುಗಳು ಬಂದಿವೆ. ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಸಲಹೆ ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ