ಆ್ಯಪ್ನಗರ

ಬೆಂಗಳೂರು: ಬೀದಿಯಲ್ಲೇ ಅಟ್ಟಾಡಿಸಿ ಪತ್ನಿ ಕೊಂದ ಪತಿ

ಹೇಮಾ, ಮಂಜುನಾಥ್‌ ದಂಪತಿ ಮದುವೆಯಾಗಿ ಎಂಟು ವರ್ಷಗಳಾಗಿದ್ದು, ಇವರ ದಾಂಪತ್ಯಕ್ಕೆ ಒಂದು ಗಂಡು ಹಾಗೂ ಹೆಣ್ಣು ಮಗು ಇದೆ. ಮಂಗಳವಾರ ರಾತ್ರಿ ದಂಪತಿ ನಡುವೆ ಖಾಸಗಿ ವಿಚಾರಕ್ಕೆ ಜಗಳ ಶುರುವಾಗಿದೆ. ಈ ವೇಳೆ ಪತಿ ಚಾಕುವಿನಿಂದ ಇರಿದಿದ್ದ.

Vijaya Karnataka Web 1 Jul 2020, 10:32 am
ಬೆಂಗಳೂರು: ಕೌಟುಂಬಿಕ ಕಲಹದ ಕಾರಣದಿಂದ ಪತಿಯೇ ಪತ್ನಿಯನ್ನು ಅಟ್ಟಾಡಿಸಿ ಕೊಲೆ ಮಾಡಿದ ಘಟನೆ ರಾಜಗೋಪಾಲನಗರ ಠಾಣೆ ವ್ಯಾಪ್ತಿಯ ಲವಕುಶನಗರದಲ್ಲಿ ನಡೆದಿದೆ.
Vijaya Karnataka Web ಪೊಲೀಸ್‌
ಪೊಲೀಸ್‌


ಹೇಮಾ ಕೊಲೆಯಾದವರು. ಇವರ ಹತ್ಯೆ ಮಾಡಿದ ಪತಿ ಮಂಜುನಾಥ್‌ ಪರಾರಿಯಾಗಿದ್ದು, ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೇಮಾ, ಮಂಜುನಾಥ್‌ ದಂಪತಿ ಮದುವೆಯಾಗಿ ಎಂಟು ವರ್ಷಗಳಾಗಿದ್ದು, ಇವರ ದಾಂಪತ್ಯಕ್ಕೆ ಒಂದು ಗಂಡು ಹಾಗೂ ಹೆಣ್ಣು ಮಗು ಇದೆ. ಮಂಗಳವಾರ ರಾತ್ರಿ ದಂಪತಿ ನಡುವೆ ಖಾಸಗಿ ವಿಚಾರಕ್ಕೆ ಜಗಳ ಶುರುವಾಗಿದೆ. ಈ ವೇಳೆ ಪತಿ ಚಾಕುವಿನಿಂದ ಇರಿದಿದ್ದ. ಜೀವ ಉಳಿಸಿಕೊಳ್ಳಲು ರಸ್ತೆಗೆ ಓಡಿದ ಪತ್ನಿಯನ್ನು ಬೆನ್ನಟ್ಟಿ ಹೋ ಗಿಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಡಿಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತಿ ತಪ್ಪಿಸಿಕೊಂಡಿದ್ದಾನೆ. ಈತನ ಬಂಧನದ ಬಳಿಕ ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ