ವಿಕ ಸುದ್ದಿಲೋಕ ಬೆಂಗಳೂರು
''ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿಪೊಲೀಸರಿಂದ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನಡೆದಿದೆ ಎನ್ನಲಾದ ವಿಡಿಯೊದಲ್ಲಿರುವ ವ್ಯಕ್ತಿ ನಾನಲ್ಲ'' ಎಂದು ಆರೋಪಿ ಹೇಳಿಕೆ ನೀಡಿದ್ದಾನೆ. ಇದರಿಂದಾಗಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಠಾಣೆಯಲ್ಲಿನಡೆದ ಹಲ್ಲೆಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ರಾಜ್ಯ ಮಾನವ ಹಕ್ಕುಗಳ ಆಯೋಗವು, ಹಲ್ಲೆಗೆ ಒಳಗಾಗಿದ್ದಾನೆ ಎನ್ನಲಾದ ಯಶವಂತ ಎಂಬಾತನನ್ನು ವಿಚಾರಣೆ ನಡೆಸಿದ್ದಾರೆ. ಆಗ ಆತ ವಿಡಿಯೊದಲ್ಲಿಇರುವವನು ನಾನಲ್ಲಎಂದು ಹೇಳಿಕೆ ನೀಡಿದ್ದಾನೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಸಂಬಂಧ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಆಯೋಗದ ಅಧಿಕಾರಿ ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಯ ವಿಡಿಯೊ ಮಾಡಿಕೊಂಡವರು ಯಾರು ಮತ್ತು ಸೋರಿಕೆ ಮಾಡಿದ್ದವರ ಬಗ್ಗೆ ಸೂಕ್ತ ಮಾಹಿತಿ ಇಲ್ಲ. ಪೊಲೀಸ್ ಇಲಾಖೆಯು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲಎಂದು ತಿಳಿದುಬಂದಿದೆ.
ಉತ್ತರ ವಿಭಾಗದಲ್ಲಿರುವ ಪ್ರತಿಷ್ಠಿತ ಮಾಲ್ವೊಂದರ ವಾಹನ ಪಾರ್ಕಿಂಗ್ ಸ್ಥಳದಲ್ಲಿಕೆಲಸ ಮಾಡುತ್ತಿದ್ದ ಯುವತಿಗೆ ಯಶವಂತ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿಮೇ ತಿಂಗಳಲ್ಲಿಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು, ಆರೋಪಿ ಯಶವಂತನನ್ನು ಠಾಣೆಗೆ ಕರೆಸಿ ಹಲ್ಲೆನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಆರೋಪಿಯ ಕಾಲುಗಳನ್ನು ಕಟ್ಟಿ ತಲೆ ಕೆಳಗು ಮಾಡಿ 'ಥರ್ಡ್ ಡಿಗ್ರಿ ಟ್ರೀಟ್ಮೆಂಟ್' ನೀಡುವುದನ್ನು ವಿಡಿಯೊ ಮಾಡಿಕೊಳ್ಳಲಾಗಿತ್ತು. ಅದು ಘಟನೆ ನಡೆದ ನಾಲ್ಕು ತಿಂಗಳ ಬಳಿಕ ಸೆ.12ರಂದು ಸೋರಿಕೆಯಾಗಿ ಜಾಲತಾಣಗಳಲ್ಲಿವೈರಲ್ ಆಗಿತ್ತು. ಆರೋಪಿಯ ಮೇಲೆ ಪೊಲೀಸರ ಹಲ್ಲೆಖಂಡನೀಯ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮಹಿಳೆಗೆ ಕಿರುಕುಳ ನೀಡುವವರಿಗೆ ಸರಿಯಾದ ಶಿಕ್ಷೆ ಎಂದು ಮತ್ತೆ ಕೆಲವರು ವಾದಿಸಿದ್ದರು.
ಮಾಧ್ಯಮಗಳಲ್ಲಿಬಂದ ವರದಿ ಆಧರಿಸಿ ಮಾನವ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.
''ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿಪೊಲೀಸರಿಂದ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನಡೆದಿದೆ ಎನ್ನಲಾದ ವಿಡಿಯೊದಲ್ಲಿರುವ ವ್ಯಕ್ತಿ ನಾನಲ್ಲ'' ಎಂದು ಆರೋಪಿ ಹೇಳಿಕೆ ನೀಡಿದ್ದಾನೆ. ಇದರಿಂದಾಗಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಠಾಣೆಯಲ್ಲಿನಡೆದ ಹಲ್ಲೆಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ರಾಜ್ಯ ಮಾನವ ಹಕ್ಕುಗಳ ಆಯೋಗವು, ಹಲ್ಲೆಗೆ ಒಳಗಾಗಿದ್ದಾನೆ ಎನ್ನಲಾದ ಯಶವಂತ ಎಂಬಾತನನ್ನು ವಿಚಾರಣೆ ನಡೆಸಿದ್ದಾರೆ. ಆಗ ಆತ ವಿಡಿಯೊದಲ್ಲಿಇರುವವನು ನಾನಲ್ಲಎಂದು ಹೇಳಿಕೆ ನೀಡಿದ್ದಾನೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಸಂಬಂಧ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಆಯೋಗದ ಅಧಿಕಾರಿ ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಯ ವಿಡಿಯೊ ಮಾಡಿಕೊಂಡವರು ಯಾರು ಮತ್ತು ಸೋರಿಕೆ ಮಾಡಿದ್ದವರ ಬಗ್ಗೆ ಸೂಕ್ತ ಮಾಹಿತಿ ಇಲ್ಲ. ಪೊಲೀಸ್ ಇಲಾಖೆಯು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲಎಂದು ತಿಳಿದುಬಂದಿದೆ.
ಉತ್ತರ ವಿಭಾಗದಲ್ಲಿರುವ ಪ್ರತಿಷ್ಠಿತ ಮಾಲ್ವೊಂದರ ವಾಹನ ಪಾರ್ಕಿಂಗ್ ಸ್ಥಳದಲ್ಲಿಕೆಲಸ ಮಾಡುತ್ತಿದ್ದ ಯುವತಿಗೆ ಯಶವಂತ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿಮೇ ತಿಂಗಳಲ್ಲಿಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು, ಆರೋಪಿ ಯಶವಂತನನ್ನು ಠಾಣೆಗೆ ಕರೆಸಿ ಹಲ್ಲೆನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಆರೋಪಿಯ ಕಾಲುಗಳನ್ನು ಕಟ್ಟಿ ತಲೆ ಕೆಳಗು ಮಾಡಿ 'ಥರ್ಡ್ ಡಿಗ್ರಿ ಟ್ರೀಟ್ಮೆಂಟ್' ನೀಡುವುದನ್ನು ವಿಡಿಯೊ ಮಾಡಿಕೊಳ್ಳಲಾಗಿತ್ತು. ಅದು ಘಟನೆ ನಡೆದ ನಾಲ್ಕು ತಿಂಗಳ ಬಳಿಕ ಸೆ.12ರಂದು ಸೋರಿಕೆಯಾಗಿ ಜಾಲತಾಣಗಳಲ್ಲಿವೈರಲ್ ಆಗಿತ್ತು. ಆರೋಪಿಯ ಮೇಲೆ ಪೊಲೀಸರ ಹಲ್ಲೆಖಂಡನೀಯ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮಹಿಳೆಗೆ ಕಿರುಕುಳ ನೀಡುವವರಿಗೆ ಸರಿಯಾದ ಶಿಕ್ಷೆ ಎಂದು ಮತ್ತೆ ಕೆಲವರು ವಾದಿಸಿದ್ದರು.
ಮಾಧ್ಯಮಗಳಲ್ಲಿಬಂದ ವರದಿ ಆಧರಿಸಿ ಮಾನವ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.