ಆ್ಯಪ್ನಗರ

ಕನ್ನಡ ನಾಡಿನ ಹೆಣ್ಣು ಮಗಳು ನಾನು, ನಿಮ್ಮ ಸೇವೆಗಾಗಿ ಒಂದು ಕೈ ಚಾಚಿದ್ದೇನೆ; ಕುಸುಮಾ

ಬಿಜೆಪಿ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿರುವ ಆರ್‌ ಆರ್‌ ನಗರ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಎರಡೂ ಪಕ್ಷಗಳು ಪಣತೊಟ್ಟಿದ್ದು, ಅಂತಿಮ ಕ್ಷಣದಲ್ಲಿ ಭರ್ಜರಿಯಾಗಿ ಮತದಾರರನ್ನು ಸೆಳೆಯಲು ಪ್ರಯತ್ನ ನಡೆಸಿವೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ರೋಡ್‌ಶೋ ಮೂಲಕ ಪ್ರಚಾರ ನಡೆಸಿದ್ರೆ, ಇತ್ತ ಕಾಂಗ್ರೆಸ್‌ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಂಟಿಯಾಗಿ ಪ್ರಚಾರ ಮಾಡುತ್ತಿದ್ದಾರೆ.

Vijaya Karnataka Web 30 Oct 2020, 2:18 pm
ಬೆಂಗಳೂರು: ರಾಜ್ಯದಲ್ಲಿ ಎದುರಾಗಿರೋ ಆರ್‌ ಆರ್‌ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಕೊನೇಕ್ಷಣದ ಕಸರತ್ತು ನಡೆಸುತ್ತಿವೆ.
Vijaya Karnataka Web Kusuma


ಈ ಮಧ್ಯೆ ಇಂದು ಪ್ರಚಾರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸಮಾ ಅವರು, ಕುಸುಮಾ ಯಾರು ಅನ್ನೋರಿಗೆ ಉತ್ತರ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಂಟಿಯಾಗಿ ನಡೆಸುತ್ತಿರುವ ರೋಡ್‌ಶೋನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕುಸುಮಾ ಯಾರು ಅನ್ನೋರಿಗೆ ಉತ್ತರ ನಾನು ಈ ಕ್ಷೇತ್ರದ ಹೆಣ್ಣು ಮಗಳು. ಹೆಣ್ಣು ಮಕ್ಕಳ ಪರವಾಗಿ ಧ್ವನಿಯೆತ್ತಲು ಬಂದಿರುವ ಕನ್ನಡ ನಾಡಿನ ಹೆಣ್ಣು ಮಗಳು ನಾನು ಎಂದರು.

ನಾನು ಸಿಎಂ ಆಗಿದ್ದಾಗ 25,000 ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದೆ. ಆದರೆ...; ಎಚ್‌ಡಿಕೆ

ಅಲ್ಲದೇ ನಾನು ನಿಮ್ಮ ಕಡೆ ಒಂದು ಕೈ ಚಾಚಿದ್ದೇನೆ. ನೀವು ನನ್ನ ಕಡೆ ಒಂದು ಕೈ ಚಾಚಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದ ಕುಸುಮಾ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿಯೆತ್ತಲು ನನಗೆ ಒಂದು ಅವಕಾಶ ಮಾಡಿಕೊಂಡಿ ಎಂದು ಮತದಾರರಲ್ಲಿ ವಿನಂತಿಸಿಕೊಂಡರು.

ಸಿದ್ದರಾಮಯ್ಯ, ದೇವೇಗೌಡ್ರೇ ಪ್ರಚಾರಕ್ಕೆ ಹೋದ್ಮೇಲೆ ಸಿಎಂ ಆಗಿ ನಾನು ಹೋಗದಿದ್ರೆ ತಪ್ಪಾಗುತ್ತೆ; ಬಿಎಸ್‌ವೈ

ಹೈವೋಲ್ಟೇಜ್‌ ಕ್ಷೇತ್ರವಾಗಿ ಮಾರ್ಪಟ್ಟಿರೋ ಆರ್‌ ಆರ್‌ನಗರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ರೋಡ್‌ಶೋ ಮೂಲಕ ಪ್ರಚಾರ ನಡೆಸಿದ್ರೆ, ಇತ್ತ ಕಾಂಗ್ರೆಸ್‌ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಂಟಿಯಾಗಿ ಪ್ರಚಾರ ಮಾಡುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ