ಆ್ಯಪ್ನಗರ

ಮುಂದೆ ದೇಶಾದ್ಯಂತ ಕಾಂಗ್ರೆಸ್‌ ಪರಿಸ್ಥಿತಿ ಏನಾಗುತ್ತೋ ಗೊತ್ತಿಲ್ಲ: ಡಿವಿಎಸ್

ದೆಹಲಿ ಚುನಾವಣಾ ಫಲಿತಾಂಶದ ಬಳಿಕ ದೇಶಾದ್ಯಂತ ಕಾಂಗ್ರೆಸ್‌ ಪರಿಸ್ಥಿತಿ ಏನಾಗುತ್ತೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ. ಬಿಜೆಪಿ ಸರಕಾರದಲ್ಲಿ ಕಗ್ಗಂಟಾಗಿದ್ದ ಖಾತೆ ಹಂಚಿಕೆ ವಿಚಾರ ಸೋಮವಾರ ಸರಿ ಹೋಗಲಿದೆ ಎಂದಿದ್ದಾರೆ.

Vijaya Karnataka Web 10 Feb 2020, 10:22 am
ದಾಸರಹಳ್ಳಿ: ದೆಹಲಿ ಚುನಾವಣಾ ಫಲಿತಾಂಶದ ಬಳಿಕ ದೆಹಲಿ ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್‌ ಪರಿಸ್ಥಿತಿ ಏನಾಗುತ್ತೋ ಗೊತ್ತಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡ ಹೇಳಿದರು.
Vijaya Karnataka Web D V Sadananda Gowda


ತುಮಕೂರು ರಸ್ತೆಯ ಮಾದಾವರ ಬಳಿಯ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಫೆಡರೇಶನ್‌ ಆಫ್‌ ಇಂಡಿಯನ್‌ ಗ್ರಾನೈಟ್‌ ಮತ್ತು ಸ್ಟೋನ್‌ ಇಂಡಸ್ಟ್ರಿ ಆಯೋಜಿಸಿದ್ದ ಸ್ಟೋನ್‌ -2020 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾತನಾಡಿದರು.

''ರಾಜ್ಯ ಬಿಜೆಪಿ ಸರಕಾರದಲ್ಲಿ ಕಗ್ಗಂಟಾಗಿದ್ದ ಖಾತೆ ಹಂಚಿಕೆ ವಿಷಯಕ್ಕೆ ಸೋಮವಾರ ತೆರೆಬೀಳಲಿದೆ,'' ಎಂದು ಹೇಳಿದರು. ''ಮಹೇಶ್‌ ಕುಮಟಳ್ಳಿ ಹಾಗೂ ಉಮೇಶ್‌ ಕತ್ತಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಮಾತನಾಡಿ, ಸಮಧಾನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಅವರಿಬ್ಬರಿಗೂ ಸಚಿವ ಸ್ಥಾನ ಸಿಗಲಿದೆ,''ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ