ಆ್ಯಪ್ನಗರ

ಕೇವಲ 11 ದಿನದಲ್ಲಿ ಮತ್ತೊಮ್ಮೆ ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌..!

ಡಿ.31ರಂದು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರ, ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಿತ್ತು. ಆದರೆ ಇದೀಗ ನಿಂಬಾಳ್ಕರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

Vijaya Karnataka Web 13 Jan 2021, 6:59 am
ಬೆಂಗಳೂರು: ಹನ್ನೊಂದು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್‌ ನಿಂಬಾಳ್ಕರ್ ಅವರನ್ನು ರಾಜ್ಯ ಸರಕಾರ ಮತ್ತೊಮ್ಮೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
Vijaya Karnataka Web hemanth nimbalkar


ಸೇಫ್ಟಿ ಸಿಟಿ ಟೆಂಡರ್‌ ಗಲಾಟೆ ಬೆನ್ನಿಗೆ ಹೇಮಂತ್‌ ನಿಂಬಾಳ್ಕರ್‌, ಡಿ ರೂಪ ವರ್ಗಾವಣೆ
ಡಿ.31ರಂದು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರ, ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಿತ್ತು. ಆದರೆ ಇದೀಗ ನಿಂಬಾಳ್ಕರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ನಿಂಬಾಳ್ಕರ್ ವಿರುದ್ಧ ಶಿಸ್ತುಕ್ರಮ ಏಕಿಲ್ಲ? ವರ್ಗಾವಣೆ ಆದೇಶದ ಬೆನ್ನಲ್ಲೇ ಡಿ. ರೂಪಾ ಪ್ರಶ್ನೆ
ನಿರ್ಭಯಾ ನಿಧಿಯಡಿ ರೂಪಿಸಲಾದ ಸುರಕ್ಷಿತ ನಗರ ಯೋಜನೆ ಗುತ್ತಿಗೆ ವಿಚಾರವಾಗಿ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ನಡುವೆ ಜಟಾಪಟಿ ನಡೆದಿತ್ತು. ಈ ವೇಳೆ ಅಧಿಕಾರಿಗಳಿಬ್ಬರ ಪರವಿರೋಧ ವಾಗ್ದಾಳಿಗೆ ಕಡಿವಾಣ ಹಾಕಲು ಗೃಹ ಇಲಾಖೆ ಕಾರ್ಯದರ್ಶಿ ಆಗಿದ್ದ ರೂಪಾ ಅವರನ್ನು ರಾಜ್ಯ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು. ಬೆಂಗಳೂರು ನಗರ ಹೆಚ್ಚುವರಿ ಕಮಿಷನರ್ ಹಾಗೂ ಟೆಂಡರ್ ಆಹ್ವಾನ ಸಮಿತಿ ಅಧ್ಯಕ್ಷರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ