ಆ್ಯಪ್ನಗರ

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು? ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ!

ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಹೆಸರಿಡಲು ಸಿಎಂ ಬಿಎಸ್‌ ಯಡಿಯೂರಪ್ಪ ಮುಂದಾಗಿದೆ ಎನ್ನುವಂತಹ ಟ್ವೀಟ್‌ ಮಾಡಿದ್ದಾರೆ ಎಚ್‌ಡಿಕೆ

Vijaya Karnataka Web 27 May 2020, 1:53 pm
ಬೆಂಗಳೂರು: ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಹೆಸರಿಡಲು ಸಿಎಂ ಬಿಎಸ್‌ ಯಡಿಯೂರಪ್ಪ ಸರ್ಕಾರ ಮುಂದಾಗಿದ್ಯಾ? ಇಂತಹದೊಂದು ಚರ್ಚೆ ಹುಟ್ಟು ಹಾಕಿದೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್‌.
Vijaya Karnataka Web 64549274


ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್‌ ಹೆಸರು ನಾಮಕರಣಕ್ಕೆ ಸಂಬಂಧಪಟ್ಟಂತೆ ಎಚ್‌ಡಿಕೆ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು' ಎಂದು ಕಿಡಿಕಾರಿದ್ದಾರೆ.


'ಸ್ವಾತಂತ್ರ್ಯ ಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ಎಂದು ಪ್ರಶ್ನಿಸಿರುವ ಎಚ್‌ಡಿಕೆ, ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹ ಮಾಡುತ್ತೇನೆ' ಎಂದು ಟ್ವೀಟ್‌ ಮಾಡಿದ್ದಾರೆ.


ಮಾಜಿ ಸಿಎಂ ಎಚ್.‌ಡಿ.ಕುಮಾರಸ್ವಾಮಿ ಟ್ವೀಟ್‌ನಿಂದ ಹಲವು ಪ್ರಶ್ನೆಗಳು ಎದ್ದಿವೆ. ಯಲಹಂಕ ಮೇಲ್ಸೇತುವೆಗೆ ನಾಮಕರಣ ಮಾಡುವ ಬಗ್ಗೆ ನಿಖರ ಮಾಹಿತಿ ಸಿಕ್ಕಿದ ಹಿನ್ನೆಲೆ ಕುಮಾರಸ್ವಾಮಿ ಈ ರೀತಿ ಟ್ವೀಟ್‌ ಮಾಡಿದ್ದಾರಾ ಅನ್ನೋ ಚರ್ಚೆ ಶುರುವಾಗಿದೆ.

ಕಲಬುರಗಿಯಲ್ಲಿ ಮುಂದುವರಿದ ಕೊರೊನಾ ಓಟ..! ಮತ್ತೆ 28 ಪಾಸಿಟಿವ್‌ ಕೇಸ್‌ ಪತ್ತೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ