ಆ್ಯಪ್ನಗರ

ನೆಲಮಂಗಲದಲ್ಲಿ ಐಟಿ ದಾಳಿ: ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ವಶಕ್ಕೆ

ಚುನಾವಣಾ ಅಕ್ರಮಕ್ಕೆ ಬಳಸಲಾಗುತ್ತಿದೆ ಎಂಬ ಶಂಕೆಯ ಮೇಲೆ ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನೆಲಮಂಗಲ ಜಾಸ್ ಟೋಲ್ ಬಳಿ ನಡೆದಿದೆ.

Vijaya Karnataka Web 1 May 2018, 11:15 am
ಬೆಂಗಳೂರು: ಚುನಾವಣಾ ಅಕ್ರಮಕ್ಕೆ ಬಳಸಲಾಗುತ್ತಿದೆ ಎಂಬ ಶಂಕೆಯ ಮೇಲೆ ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನೆಲಮಂಗಲ ಜಾಸ್ ಟೋಲ್ ಬಳಿ ನಡೆದಿದೆ.
Vijaya Karnataka Web money


ಆದಾಯ ತೆರಿಗೆ ಅಧಿಕಾರಿ ಡಿಸಿ ಗೌತಮ್ ಮತ್ತು ನೆಲಮಂಗಲ ಚುನಾವಣಾ ಅಧಿಕಾರಿ ಶಿವಾನಂದ ಮೂರ್ತಿ ನೇತೃತ್ವದಲ್ಲಿ ಎಸ್‌ಎಸ್‌ಟಿ ತಂಡ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಕಾರ್ ಚೇಸ್ ಮಾಡಿ ನೆಲಮಂಗಲದ ಟೋಲ್ ಗೇಟ್ ಬಳಿ ಅಡ್ಡಿಗಟ್ಟಿ ಪರಿಶೀಲನೆ ನಡೆಸಿದ್ದಾಗ ಹಣ ಪತ್ತೆಯಾಗಿದೆ.

ಕಾರಿನಲ್ಲಿದ್ದ ಹಣವನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ವಾಹನ ಸಮೇತ ಹಣವನ್ನು ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿಗೆ ಮರಳಿ ವಿಚಾರಣೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ