ಆ್ಯಪ್ನಗರ

67ನೇ ವಸಂತಕ್ಕೆ ಕಾಲಿಟ್ಟ ವೈಎಸ್‌ವಿ ದತ್ತಾ: ಕೊರೊನಾ ಕಾರಣಕ್ಕೆ ಅಭಿಮಾನಿಗಳಲ್ಲಿ ವಿಶೇಷ ಮನವಿ!

ಇಂದು(ಬುಧವಾರ) 67ನೇ ವಸಂತಕ್ಕೆ ಕಾಲಿಟ್ಟಿರುವ ಜೆಡಿಎಸ್ ನಾಯಕ ಹಾಗೂ ಮಾಜಿ ಶಾಸಕ ವೈಎಸ್‌ವಿ ದತ್ತಾ, ಕೊರೊನಾ ವೈರಸ್ ಹಾವಳಿಯ ಕಾರಣಕ್ಕೆ ಯಾರೂ ಮನೆಗೆ ಬಂದು ಶುಭ ಕೋರದಂತೆ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಮನೆಯಲ್ಲೇ ಉಳಿದು ಸಾಮಾಜಿಕ ಜವಾಬ್ದಾರಿ ಮೆರೆಯುವಂತೆ ದತ್ತಾ ವಿನಂತಿ ಮಾಡಿಕೊಂಡಿದ್ದಾರೆ.

Vijaya Karnataka Web 24 Jun 2020, 7:14 am
ಬೆಂಗಳೂರು: ಇಂದು(ಬುಧವಾರ) ಜೆಡಿಎಸ್ ನಾಯಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್‌ವಿ ದತ್ತಾ 67ನೆ ವಸಂತಕ್ಕೆ ಕಾಲಿಟ್ಟಿದ್ದು, ಮಾಜಿ ಶಾಸಕರಿಗೆ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಹುಟ್ಟು ಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
Vijaya Karnataka Web YSV Datta
ಸಂಗ್ರಹ ಚಿತ್ರ


ಈ ಮಧ್ಯೆ ಹುಟ್ಟು ಹಬ್ಬದ ಪ್ರಯುಕ್ತ ವೈಎಸ್‌ವಿ ದತ್ತಾ ತಮ್ಮ ಅಭಿಮಾನಿಗಳಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದು, ಕೊರೊನಾ ವೈರಸ್ ಹಾವಳಿಯ ಕಾರಣ ಯಾರೂ ಮನೆಗೆ ಬಂದು ಹುಟ್ಟು ಹಬ್ಬ ಆಚರಣೆ ಮಾಡದಂತೆ ಕೇಳಿ ಕೊಂಡಿದ್ದಾರೆ.


ಈ ಕುರಿತು ಸರಣಿ ಟ್ವೀಟ್ ಮಾಡಿರುವ ವೈಎಸ್‌ವಿ ದತ್ತಾ, ಪ್ರತಿ ವರ್ಷ ಅಭಿಮಾನಿಗಳು ಹಾಗೂ ಹಿತೈಷಿಗಳು ಮನೆಎಗೆ ಬಂದು ಹುಟ್ಟು ಹಬ್ಬಕ್ಕೆ ಶುಭಾಶಯ ಕೋರುತ್ತಿದ್ದರು. ಆದರೆ ಇಡೀ ವಿಶ್ವವೇ ಇದೀಗ ಕೊರೊನಾ ಸಾಂಕ್ರಾಮಿಕ ರೋಗದಿಂದ ನರಳುತ್ತಿದ್ದು, ನಮ್ಮ ನಿಮ್ಮೆಲ್ಲರ ಜವಾಬ್ದಾರಿ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

SSLC ವಿದ್ಯಾರ್ಥಿಗಳಿಗಾಗಿ ವೈಎಸ್‌ವಿ ದತ್ತ ರಿಂದ ಫೇಸ್‌ಬುಕ್‌ ಮೂಲಕ ಗಣಿತ ಬೋಧನೆ

ಈ ಹಿನ್ನೆಲೆಯಲ್ಲಿ ಯಾರೂ ತಮ್ಮ ಮನೆಗಳಿಂದ ಹೊರಗೆ ಬರದಂತೆ ಮನವಿ ಮಾಡಿರುವ ದತ್ತಾ, ನಿಮ್ಮ ಹಾರೈಕೆ ಆಶೀರ್ವಾದ ಸದಾ ನನ್ನ ಮೇಲಿರಲಿ ಎಂದು ವಿನಮ್ರತೆಯಿಂದ ಟ್ವೀಟ್ ಮಾಡಿದ್ದಾರೆ.

ಎಲ್ಲರೂ ತಮ್ಮ ಮನೆಗಳಿಂದಲೇ ನನಗೆ ಹುಟ್ಟು ಹಬ್ಬಕ್ಕೆ ಹರಿಸಿದರೆ ಅಷ್ಟೇ ಸಾಕು, ನಿಮ್ಮ ಅಭಿಮಾನಕ್ಕೆ ಸದಾ ಚಿರಋಣಿಯಾಗಿರುತ್ತೇನೆ ಎಂದು ಕಾರ್ಯಕರ್ತರಲ್ಲಿ ಹಾಗೂ ಅಭಿಮಾನಿಗಳಲ್ಲಿ ವೈಎಸ್‌ವಿ ದತ್ತಾ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ