ಆ್ಯಪ್ನಗರ

ಕಲ್ಯಾಣ ಕರ್ನಾಟಕ: 363 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಗೆ ಅನುಮೋದನೆ

ಇತ್ತೀಚೆಗಷ್ಟೇ ಹೈದರಾಬಾದ್‌ ಕರ್ನಾಟಕಕ್ಕೆ 'ಕಲ್ಯಾಣ ಕರ್ನಾಟಕ' ಎಂದು ಮರುನಾಮಕರಣ ಮಾಡಲಾಗಿತ್ತು. ಇದೀಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರಿಯಾಯೋಜನೆ ಯೋಜಿಸಲಾಗಿದ್ದು, ಈ ಕ್ರಿಯಾಯೋಜನೆಗೆ ಅನುಮೋದನೆಯೂ ದೊರೆತಿದೆ.

Vijaya Karnataka Web 27 Sep 2019, 4:29 pm
ಬೆಂಗಳೂರು: ಗುಲ್ಬರ್ಗಾ ಜಿಲ್ಲೆ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳಲ್ಲಿ ಮೈಕ್ರೋ ಯೋಜನೆಯಡಿ 254 ಕೋಟಿ ರೂ. ಹಾಗು ಮ್ಯಾಕ್ರೋ ಯೋಜನೆಯಡಿ 109 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಗುಲ್ಬಾರ್ಗ ಜಿಲ್ಲಾ ಸಲಹಾ ಸಮಿತಿಯು (ಕೆಕೆಆರ್ ಡಿಬಿ) ಅನುಮೋದನೆ ನೀಡಿದೆ.
Vijaya Karnataka Web kalyana karnataka


ವಿಕಾಸಸೌಧದಲ್ಲಿಂದು ಗುಲ್ಬರ್ಗಾ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ. ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯು ಮೈಕ್ರೋ ಯೋಜನೆಯಡಿ ಸಾಮಾಜಿಕ ವಲಯಕ್ಕೆ 100 ಕೋಟಿ ರೂ. ಮತ್ತು ಸಾಮಾಜಿಕೇತರ ವಲಯಕ್ಕೆ 151 ಕೋಟಿ ಹಾಗು ಮ್ಯಾಕ್ರೋ ಯೋಜನೆಯಡಿ ಸಾಮಾಜಿಕ ವಲಯಕ್ಕೆ 54 ಕೋಟಿ ಮತ್ತು ಸಾಮಾಜಿಕೇತರ ವಲಯಕ್ಕೆ 54 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

'ಕಲ್ಯಾಣ ಕರ್ನಾಟಕ ಉತ್ಸವ' : ಕಲಬುರಗಿಯಲ್ಲಿ ಬಿಎಸ್‌ವೈ ಧ್ವಜಾರೋಹಣ

ಡಾ. ನಂಜುಂಡಪ್ಪ ವರದಿಯ ಆಧಾರದಡಿ ಈ ಪ್ರದೇಶದ ಅಭಿವೃದ್ಧಿಗಾಗಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಮಂಡಳಿಯ ವ್ಯಾಪ್ತಿಯಲ್ಲಿ ಒಟ್ಟು 41 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತಿವೆ. 1500 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ನಿಯಮಾನುಸಾರ ಈ ಯೋಜನೆಯಡಿ ಬೃಹತ್ ಯೋಜನೆಗಳಾಗಿದ್ದರೂ 3 ವರ್ಷಗಳೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ವಿಳಂಬ ಮಾಡದೇ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಹೊಸತಾಲೂಕುಗಳಲ್ಲಿ ಮಿನಿವಿಧಾನಸೌಧ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು. ಮಂಡಳಿಗೆ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಿ ತಾಂತ್ರಿಕವಾಗಿ ಸದೃಡಗೊಳಿಸಲಾಗುವುದು. ಕಾಮಗಾರಿಗಳ ಗುಣಮಟ್ಟವನ್ನು ಮೌಲ್ಯಮಾಪನ ಮಾಡಲಾಗುವುದು. ಈ ಪ್ರದೇಶದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಶ್ರೀ ಗೋವಿಂದ ಎಂ. ಕಾರಜೋಳ ಅವರು ತಿಳಿಸಿದರು.

ಕಲ್ಯಾಣ ಕರ್ನಾಟಕ ಉತ್ಸವ-ಧ್ವಜಾರೋಹಣ

ಸಭೆಯಲ್ಲಿ ಶಾಸಕರಾದ ಶ್ರೀ ದತ್ತಾತ್ರೇಯ ಪಾಟೀಲ ರೇವೂರ್, ಶ್ರೀ ಬಸವರಾಜ್ ಮತ್ತಿಮುಡ, ಶ್ರೀ ರಾಜಕುಮಾರ್ ಪಾಟೀಲ್ ಟೆಲ್ಕೂರ್, ಶ್ರೀ ಸುಭಾಷ್ ಆರ್ ಗುತ್ತೇದಾರ್, ಡಾ. ಅವಿನಾಶ್ ಜಾದವ್, ಶ್ರೀ ಪ್ರಿಯಾಂಕ ಖರ್ಗೆ, ಡಾ. ಅಜೇಯಸಿಂಗ್ , ಶ್ರೀ ಎಂ.ವೈ. ಪಾಟೀಲ್, ಶ್ರೀ ತಿಪ್ಪಣ್ಣ ಕಮ್ಮತನೂರ್, ಶ್ರೀಮತಿ ಕನಿಜ್ಹ ಫಾತೀಮ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ಶ್ರೀ ವಿ. ಶ್ರೀನಿವಾಸ, ಜಿಲ್ಲಾಧಿಕಾರಿ ಶ್ರೀ ಡಿ.ಶರತ್, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಪಿ.ರಾಜ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ