ಆ್ಯಪ್ನಗರ

ಸೋಮವಾರ ಕರ್ನಾಟಕ ಬಂದ್: ರೈತ ಹೋರಾಟಕ್ಕೆ ಬೆಂಬಲ ಘೋಷಿಸಿದ ಕಾಂಗ್ರೆಸ್

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಸಾರಥ್ಯದ ಸರ್ಕಾರಗಳೆರಡೂ ರೈತ ವಿರೋಧಿ ಎಂದಿರುವ ಕಾಂಗ್ರೆಸ್, ರೈತರ ಭೂಮಿ ಮಾತ್ರವಲ್ಲ, ರೈತರ ಬೆಳೆ ಮೇಲೆ ಎರಡೂ ಸರ್ಕಾರಗಳೂ ದಾಳಿ ನಡೆಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Vijaya Karnataka Web 27 Sep 2020, 5:15 pm

ಹೈಲೈಟ್ಸ್‌:

  • ರೈತರ ಹೋರಾಟಕ್ಕೆ ನಮ್ಮ ಬೆಂಬಲ: ಡಿ.ಕೆ ಶಿವಕುಮಾರ್
  • ಕರ್ನಾಟಕ ಹಾಗೂ ದೇಶಾದ್ಯಂತ ಬೆಂಬಲವಿದೆ: ರಣದೀಪ್ ಸಿಂಗ್ ಸುರ್ಜೇವಾಲಾ
  • ಸೋಮವಾರ ಕರ್ನಾಟಕ ಬಂದ್‌ಗೆ ರೈತ ಸಂಘಟನೆಗಳ ಕರೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಬೆಂಗಳೂರು: ಕಾಂಗ್ರೆಸ್ ಪಕ್ಷ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೆವಾಲ ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, 'ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. ಹೀಗಾಗಿ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಈ ಬಗ್ಗೆ ಮಾತನಾಡಲಿದ್ದಾರೆ' ಎಂದು ತಿಳಿಸಿದರು.

ಅಷ್ಟೇ ಅಲ್ಲ, 'ಶನಿವಾರ ಸದನದಲ್ಲಿ ಸವಾಲು ಪ್ರತಿ ಸವಾಲುಗಳು ನೋಡಿದ್ದೇವೆ. ಮುಂದಿನ ನಡೆ ಬಗ್ಗೆ ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ' ಎಂದು ಡಿಕೆಶಿ ಹೇಳಿದರು.

ಸೋಮವಾರ ಕರ್ನಾಟಕ ಬಂದ್: ಕಾಂಗ್ರೆಸ್, ಜೆಡಿಎಸ್ ನಿಲುವೇನು? ಬಿಜೆಪಿ ವಾದವೇನು?

ಇದೇ ವೇಳೆ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಸಾರಥ್ಯದ ಸರ್ಕಾರಗಳೆರಡೂ ರೈತ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರ ಭೂಮಿ ಮಾತ್ರವಲ್ಲ, ರೈತರ ಬೆಳೆ ಮೇಲೆ ಎರಡೂ ಸರ್ಕಾರಗಳೂ ದಾಳಿ ನಡೆಸುತ್ತಿವೆ ಎಂದ ಸುರ್ಜೇವಾಲಾ, ರಾಷ್ಟ್ರೀಯ ಮಟ್ಟದಲ್ಲಿ ರಾಹುಲ್ ಹಾಗೂ ಸೋನಿಯಾ ಸಾರಥ್ಯದಲ್ಲಿ ಹೋರಾಟ ನಡೆಸಿದರೆ, ಕರ್ನಾಟಕದಲ್ಲಿ ಡಿಕೆಶಿ ಸಾರಥ್ಯದಲ್ಲಿ ರೈತರ ಪರ ನಿಲ್ಲಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದರು. ಬಿಲ್ಡರ್ ಲಾಬಿ ವಿರುದ್ಧ ಹೋರಾಡಲು, ದೇಶದ ಹಾಗೂ ಕರ್ನಾಟಕ ರಾಜ್ಯದ ರೈತರ ಪರ ನಿಲ್ಲಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಸೋಮವಾರ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?

ಸೋಮವಾರದ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ತನ್ನ ಬೆಂಬಲ ಸೂಚಿಸುವ ಮುನ್ನವೇ ಭಾನುವಾರ ಬೆಳಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡ ಕರ್ನಾಟಕ ಬಂದ್‌ಗೆ ತಮ್ಮ ಬೆಂಬಲ ಸೂಚಿಸಿ ರೈತ ಹೋರಾಟದ ಪರ ಇರೋದಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.

ಸೆ. 28ಕ್ಕೆ ಚಿಕ್ಕಮಗಳೂರು ಜಿಲ್ಲಾ ಬಂದ್‌ಗೆ ಕರೆ ನೀಡಿದ ರೈತ ಸಂಘ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ