ಆ್ಯಪ್ನಗರ

ಸಿಎಂ ಬಿಎಸ್‌ವೈ ಪಿಎ ಸಂತೋಷ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಕೊನೆಗೂ ಆತ್ಮಹತ್ಯೆ ಯತ್ನದ ಸತ್ಯ ರಿವೀಲ್‌; ಏನು ಹೇಳಿದ್ರು?

ದೊಂದು ಆಕಸ್ಮಿಕ ಘಟನೆಯಾಗಿದ್ದು, ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯು ಅಲ್ಲ. ನನಗೆ ಸ್ವಲ್ಪ ಅಜೀರ್ಣವಾಗಿದ್ದ ಹಿನ್ನೆಲೆ ಮಾತ್ರೆ ನುಂಗಿದ್ದೆ. ಅಜಿರ್ಣ ಮಾತ್ರೆ ಬದಲಾಗಿ ನಿದ್ದೆ ಮಾತ್ರೆ ಸೇವಿಸಿಬಿಟ್ಟಿದ್ದೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ತಿಳಿಸಿದ್ದಾರೆ.

Vijaya Karnataka Web 30 Nov 2020, 1:43 pm
ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ಬೆಂಗಳೂರಿನ ಎಂಎಸ್‌ ರಾಮಯ್ಯ ಆಸ್ಪತ್ರೆ ಸೇರಿದ್ದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರಬಂದ ಸಂತೋಷ್‌ ತಾನು ಯಾವುದೇ ಆತ್ಮಹತ್ಯೆಗೆ ಯತ್ನಿಸಿಲ್ಲ, ಅಜಿರ್ಣ ಮಾತ್ರೆ ಬದಲಾಗಿ ನಿದ್ರೆ ಮಾತ್ರೆ ತಿಂದಿರುವುದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿಸಿದ್ದಾರೆ.
Vijaya Karnataka Web pa santhosh


ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಇದೊಂದು ಆಕಸ್ಮಿಕ ಘಟನೆಯಾಗಿದ್ದು, ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯು ಅಲ್ಲ. ನನಗೆ ಸ್ವಲ್ಪ ಅಜೀರ್ಣವಾಗಿದ್ದ ಹಿನ್ನೆಲೆ ಮಾತ್ರೆ ನುಂಗಿದ್ದೆ. ಅಜಿರ್ಣ ಮಾತ್ರೆ ಬದಲಾಗಿ ನಿದ್ದೆ ಮಾತ್ರೆ ಸೇವಿಸಿಬಿಟ್ಟಿದ್ದೆ. ನನಗೆ ನಿದ್ದೆ ಬರದಿದ್ದಾಗ ನಿದ್ದೆ ಮಾತ್ರೆ ಸೇವಿಸುವ ಅಭ್ಯಾಸವಿದೆ. ಅರ್ಧ ಮಾತ್ರೆ ಸೇವಿಸುತ್ತಿದ್ದೆ, ಮೊನ್ನೆ ಇಡೀ ಮಾತ್ರೆ ಸೇವಿಸಿದ್ದೆ. ಹೀಗಾಗಿ ಈ ರೀತಿಯ ಆಚಾತುರ್ಯ ನಡೆಯಿತು ಎಂದಿದ್ದಾರೆ. ಒಂದೆರಡು ದಿನ ವಿಶ್ರಾಂತಿ ಪಡೆದು ಸಿಎಂ ಭೇಟಿಯಾಗುತ್ತೇನೆ ಎಂದು ಎನ್‌ಆರ್‌ ಸಂತೋಷ್‌ ತಿಳಿಸಿದ್ದಾರೆ.

ಡಿಕೆಶಿ ವಿರುದ್ಧ ಗುಡುಗು!
ಇದೇ ವೇಳೆ ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಲುಪಿರುವ ಮಾಹಿತಿ ಇತ್ತು ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸಂತೋಷ್ ಟಾಂಗ್ ನೀಡಿದ್ದಾರೆ. ಉಪಚುನಾವಣೆ ಸೋಲಿನಿಂದ ಡಿಕೆಶಿ ಅವರಿಗೆ ಮತಿಗೆಟ್ಟಿರಬೇಕು. ಅವರು ಈ ಮೊದಲೂ ಈ ರೀತಿಯ ಹೇಳಿಕೆಗಳನ್ನ ಕೊಟ್ಟಿದ್ದರು. ತನಿಖಾ ಸಂಸ್ಥೆ ದಾಳಿ ಮಾಡಿದಾಗಲೂ ಇದೇ ರೀತಿ ಆರೋಪ ಮಾಡುತ್ತಾರೆ. ಡಿಕೆಶಿ ಅವರಿಗೆ ರೆಸ್ಟ್ ಕೊಟ್ಟು ಒಂದು ತಿಂಗಳು ಆಸ್ಪತ್ರೆಗೆ ಸೇರಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರು: ಸಿಎಂ ಬಿಎಸ್‌ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್‌ಐಆರ್‌ ದಾಖಲು!

ಮುಂದಿನ ಲೇಖನ