ಆ್ಯಪ್ನಗರ

ಡಿಜೆ ಹಳ್ಳಿ ಗಲಭೆ: ಕ್ಲೇಮ್ ಕಮಿಷನರ್ ಆಗಿ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ನೇಮಕ

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ನಷ್ಟ ವಸೂಲಿ ಮಾಡುವ ನಿಟ್ಟಿಲ್ಲಿ ಕ್ಲೇಮ್ ಕಮಿಷನರ್ ಆಗಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಎಚ್.ಎಸ್. ಕೆಂಪಣ್ಣ ನೇಮಕ ಮಾಡಲಾಗಿದೆ.

Vijaya Karnataka Web 28 Aug 2020, 1:48 pm
ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ನಷ್ಟ ವಸೂಲಿ ಮಾಡುವ ನಿಟ್ಟಿನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟಿಸ್ ಎಚ್.ಎಸ್. ಕೆಂಪಣ್ಣ ಅವರು ಕ್ಲೇಮ್ ಕಮಿಷನರ್‌ ಆಗಿ ನೇಮಕಗೊಂಡಿದ್ದಾರೆ.
Vijaya Karnataka Web dj halli


ಪ್ರವಾದಿ ನಿಂದನೆ ಮಾಡಲಾಗಿದೆ ಎಂದು ಡಿಜೆ ಹಳ್ಳಿ, ಕೆಜಿ ಹಳ್ಳಿಯನ್ನು ಕಿಡಿಗೇಡಿಗಳು ಹಿಂಸಾಚಾರ ನಡೆಸಿದ್ದರು. ಈ ವೇಳೆ ಡಿಜೆ ಹಳ್ಳಿ ಪೊಲೀಸ್ ಠಾಣೆ ಹಾಗೂ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ನಿವಾಸದ ಮೇಲೆ ದಾಳಿ ನಡೆದಿತ್ತು.

ಗಲಭೆ ಸಂದರ್ಭದಲ್ಲಿ ಕಿಡಿಗೇಡಿಗಳು ಹಲವು ಪೊಲೀಸ್ ವಾಹನಗಳಿಗೆ ಬೆಂಕಿ ಇಟ್ಟಿದ್ದರು. ಈ ಕೃತ್ಯದಿಂದ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಗಲಭೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳಿಂದ ನಷ್ಟ ವಸೂಲಿ ಮಾಡುವ ನಿಟ್ಟಿನಲ್ಲಿ ಕ್ಲೇಮ್ ಕಮಿಷನರ್‌ ನೇಮಕ ಮಾಡುವುದಾಗಿ ಸರ್ಕಾರ ತಿಳಿಸಿತ್ತು.

ಡಿಜೆ ಹಳ್ಳಿ ಗಲಭೆ: ಬಿಎಸ್‌ವೈಗೆ ಡಿ.ಕೆ ಶಿವಕುಮಾರ್ ಬರೆದ ಪತ್ರದಲ್ಲೇನಿದೆ?

ಅದರಂತೆ ಇದೀಗ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟಿಸ್ ಎಚ್.ಎಸ್. ಕೆಂಪಣ್ಣ ಅವರು ಬೆಂಗಳೊರು ಗಲಭೆ ಪ್ರಕರಣದಲ್ಲಿ ಕ್ಲೇಮ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ. ಕ್ಲೇಮ್ ಕಮಿಷನರ್ ಗಲಭೆಯ ಸಂದರ್ಭದಲ್ಲಿ ಆದ ನಷ್ಟ ಅಂದಾಜಿಸಬೇಕು ಹಾಗೂ ನಷ್ಟದ ಹೊಣೆಗಾರಿಕೆ ನಿಗದಿಪಡಿಸಬೇಕಾದ ಅಧಿಕಾರ ಹೊಂದಿದ್ದಾರೆ.

ನಷ್ಟವನ್ನೂ ಕಿಡಿಗೇಡಿಗಳಿಂದ ವಸೂಲಿ ಮಾಡುವುದು ನಿಶ್ಚಿತ


ಬೆಂಗಳೂರು ಗಲಭೆ: ಮತ್ತೆ 35 ಮಂದಿಯ ಬಂಧನ, ಬಂಧಿತರ ಸಂಖ್ಯೆ 340ಕ್ಕೆ ಏರಿಕೆ..!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಪೈಸೆಯ ನಷ್ಟವನ್ನೂ ಕಿಡಿಗೇಡಿಗಳಿಂದ ವಸೂಲಿ ಮಾಡುವುದು ನಿಶ್ಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್ ಮಾಡಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ