ಆ್ಯಪ್ನಗರ

ಬಿಬಿಎಂಪಿ ವಿಧೇಯಕ: ಪರಿಶೀಲನೆ ನಡೆಸಿ ವರದಿ ನೀಡಲು ಜಂಟಿ ಸಮಿತಿ ರಚನೆ

2020 ನೇ ಸಾಲಿನ ಬಿಬಿಎಂಪಿ ವಿಧೇಯಕವನ್ನು ವರದಿ ಸಲ್ಲಿಸಲು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯ ಕುರಿತಾದ ವಿವರ ಇಲ್ಲಿದೆ.

Vijaya Karnataka Web 11 Aug 2020, 7:41 pm
ಬೆಂಗಳೂರು: ವಿಧಾನ ಸಭೆಯಲ್ಲಿ 2020 ನೇ ಸಾಲಿನ ಬಿಬಿಎಂಪಿ ವಿಧೇಯಕವನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಿದ್ದಾರೆ.
Vijaya Karnataka Web kageri


ಸದನದ ನಿರ್ಣಯದಂತೆ 2020 ನೇ ಸಾಲಿನ ಬಿಬಿಎಂಪಿ ವಿಧೇಯಕವನ್ನುಈ ಸಮಿತಿ ಪರಿಶೀಲನೆ ನಡೆಸಿ ಸಭಾಧ್ಯಕ್ಷರಿಗೆ ವರದಿಯನ್ನು ಸಲ್ಲಿಸಬೇಕಾಗಿದೆ. ಸಮಿತಿಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಸದಸ್ಯರು ಒಳಗೊಂಡಿದ್ದಾರೆ.

ಸಮಿತಿಯಲ್ಲಿ ವಿಧಾನಸಭಾ ಸದಸ್ಯರಾದ ಎಸ್‌ ರಘು, ರವಿ ಸುಬ್ರಹ್ಮಣ್ಯ, ಎಂ. ಕೃಷ್ಣಪ್ಪ, ಸತೀಶ್ ರೆಡ್ಡಿ, ಅರವಿಂದ್ ಲಿಂಬಾವಳಿ, ಉದಯ್ ಬಿ ಗರುಡಾಚಾರ್‌, ಎಸ್‌ ಆರ್‌ ವಿಶ್ವನಾಥ್, ನರಸಿಂಹನಾಯಕ, ರಾಮಲಿಂಗ ರೆಡ್ಡಿ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ ಆರ್‌. ಮಂಜುನಾಥ್, ಶ್ರೀನಿವಾಸಮೂರ್ತಿ ಇದ್ದಾರೆ.

ಕೋವಿಡ್‌ ನಿಯಂತ್ರಣ: ರಾಜ್ಯ ಸರ್ಕಾರ ಪ್ರಧಾನಿ ಮೋದಿ ಮುಂದಿಟ್ಟ ಬೇಡಿಕೆ ಏನು?

ಇನ್ನು ವಿಧಾನ ಪರಿಷತ್ ಸದಸ್ಯರಾದ ಕೆ. ಗೋವಿಂದ ರಾಜು, ಎಂ. ನಾರಾಯಣ ಸ್ವಾಮಿ, ಪಿ. ಆರ್‌ ರಮೇಶ್ ಕೆ. ಎ ತಿಪ್ಪೇಸ್ವಾಮಿ, ಎನ್‌. ರವಿಕುಮಾರ್‌, ಅ. ದೇವೇಗೌಡ, ತೇಜಸ್ವಿ ಗೌಡರನ್ನು ಸಮಿತಿ ಒಳಗೊಂಡಿದೆ.

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಯ ನಿಯಮ 255(2) ಮೇರೆಗೆ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವಜೆ. ಮಾಧುಸ್ವಾಮಿ ಅವರನ್ನು ಸಿಎಂ ಬಿಎಸ್‌ ಯಡಿಯೂರಪ್ಪನವರು ನಿಯೋಜಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ: ಯಶಸ್ಸಿಗೆ ಶ್ರಮಿಸಿದವರಿಗೆ ಕೃತಜ್ಞತೆ ಸಲ್ಲಿಸಿದ ಬಿಎಸ್‌ವೈ

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 260 ರ ಪ್ರಕಾರ ಜಂಟಿ ಪರಿಶೀಲನಾ ಸಮಿತಿ ತನ್ನ ಅಧ್ಯಕ್ಷನನ್ನು ತಾನೇ ಚುನಾಯಿಸಬೇಕಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ