ಆ್ಯಪ್ನಗರ

ಮುಖ್ಯರಸ್ತೆಗಳು ಖಾಲಿ ಖಾಲಿ, ಮಾರ್ಕೆಟ್‌ಗಳಲ್ಲಿ ಜನಜಂಗುಳಿ ! ಇದು ಬೆಂಗಳೂರು ಸ್ಥಿತಿ

ಕೊರನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ ಆಗಿದ್ದರೂ ಬೆಂಗಳೂರಿನ ಕೆಲವೊಂದು ಮಾರ್ಕೆಟ್‌ಗಳಲ್ಲಿ ಜನಜಂಗುಳಿ ಕಂಡುಬಂತು. ಮುಖ್ಯರಸ್ತೆಗಳಲ್ಲಿ ವಾಹನ ಓಡಾಟ ವಿರಳವಾಗಿದ್ದರೂ ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.

Vijaya Karnataka Web 24 Mar 2020, 10:08 am
ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‌ಡೌನ್‌ಗೆ ಸರ್ಕಾರ ಆದೇಶ ಮಾಡಿದ್ದು ಬೆಂಗಳೂರಿನಲ್ಲಿ ಜನಸಂಚಾರ ವಿರಳವಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಓಡಾಟವಿಲ್ಲದೆ ಖಾಲಿ ಖಾಲಿಯಾಗಿದ್ದರೂ ಮಾರ್ಕೆಟ್‌ಗಳಲ್ಲಿ ಮಾತ್ರ ಜನಜಂಗುಳಿ ಕಂಡುಬಂತು.
Vijaya Karnataka Web bengaluru market


ಸಂಪೂರ್ಣ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯ ಜೊತೆಗೆ ಖಾಸಗಿ ಸಾರಿಗೆಗಳಿಗೂ ರಸ್ತೆಗಿಳಿಯಲು ಅವಕಾಶವಿಲ್ಲ. ಇದರಿಂದ ಅಗತ್ಯ ಸಾಮಾಗ್ರಿಗಳ ಖರೀದಿಗೆ ಜನರು ನಡೆದುಕೊಂಡೋ ಅಥವಾ ದ್ವಿಚಕ್ರ ವಾಹನಗಳಲ್ಲಿ ಹೋಗುತ್ತಿದ್ದಾರೆ.

ಇಂದಿರಾ ಕ್ಯಾಂಟೀನ್ ತೆರೆಯುವುದಿಲ್ಲ! ಬಿಎಸ್‌ವೈ ಘೋಷಣೆ

ದಿನಸಿ ಅಂಗಡಿ, ಹಣ್ಣು, ತರಕಾರಿ ಹಾಗೂ ಮಾಂಸ ಮಾರಾಟಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಬಹುತೇಕ ಜನರು ಸೋಮವಾರದಂದು ದಿನಸಿ ಸಾಮಾಗ್ರಿಗಳನ್ನು ಖರೀದಿ ಮಾಡಿ ಇಟ್ಟಿದ್ದರೂ ಮಂಗಳವಾರವೂ ದಿನಸಿ ಅಂಗಡಿಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗುಂಪುಗೂಡಿದ್ದಾರೆ.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಮಾರ್ಕೆಟ್‌ಗಳಲ್ಲಿ ಹೂವು, ಹಣ್ಣು, ತರಕಾರಿ ಖದೀರಿ ಭರಾಟೆ ಜೋರಾಗಿದೆ. ಈ ಸಂದರ್ಭದವನ್ನು ದುರ್ಬಳಕೆ ಮಾಡುತ್ತಿರುವ ಕೆಲವು ವ್ಯಾಪಾರಸ್ಥರು ತರಕಾರಿ ಹಣ್ಣು ಹಂಪಲುಗಳ ಬೆಲೆಯನ್ನು ಏರಿಕೆ ಮಾಡಿದ್ದು, ಇದಕ್ಕಾಗಿ ಗ್ರಾಹಕರು ಚೌಕಾಸಿ ಮಾಡುತ್ತಿರುವ ದೃಶ್ಯವೂ ಸಾಮಾನ್ಯವಾಗಿತ್ತು.

30 ರಾಜ್ಯ/ಕೇಂದ್ರಾಡಳಿತ ಪ್ರದೇಶ ಸಂಪೂರ್ಣ ಬಂದ್: ಕೇಂದ್ರದ ಸುತ್ತೋಲೆಯ ಇಂಚಿಂಚು ಮಾಹಿತಿ!

ಈ ನಡುವೆ ಜನರು ರಸ್ತೆಗಿಳಿಯಬಾರದು, ಕಾರು, ದ್ವಿಚಕ್ರ ವಾಹನಗಳಲ್ಲಿ ಓಡಾಟ ನಡೆಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿನಾ ಕಾರಣ ರಸ್ತೆಗಿಳಿದ ಜನರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ವಾರ್ನಿಂಗ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ