ಆ್ಯಪ್ನಗರ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ, ದಿಲ್ಲಿಯಿಂದ ಬಂದ 4,000 ಕೆಜಿ ತೂಕದ ಖಡ್ಗ

ವಿಶೇಷ ಟ್ರಕ್‌ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಪುರೋಹಿತರು, ಸಚಿವರ ನೇತೃತ್ವದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆಯನ್ನು ನೆರವೇರಿಸಿದರು.

Vijaya Karnataka Web 2 May 2022, 9:12 pm
ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4,000 ಕೆ.ಜಿ. ತೂಕದ ಖಡ್ಗವು ಹೊಸದಿಲ್ಲಿಯಿಂದ ಬೆಂಗಳೂರು ತಲುಪಿದೆ.
Vijaya Karnataka Web ಕೆಂಪೇಗೌಡ ಪ್ರತಿಮೆ
ಕೆಂಪೇಗೌಡ ಪ್ರತಿಮೆ


ವಿಶೇಷ ಟ್ರಕ್‌ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಬೆಂಗಳೂರಿಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಪುರೋಹಿತರು, ಸಚಿವರ ನೇತೃತ್ವದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆಯನ್ನು ನೆರವೇರಿಸಿದರು. ಜತೆಗೆ, ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಎಲ್ಲ ಕಾರ್ಮಿಕ ಸಿಬ್ಬಂದಿಗೂ ಅಭಿನಂದನೆ ಸಲ್ಲಿಸಿದರು.

ಬೆಂಗಳೂರಿನ ಬೀದಿಗಳಲ್ಲಿ ಸಾವಿನ ಕುಣಿಕೆಗಳಾಗುತ್ತಿವೆ ಒಎಫ್ಸಿ ಕೇಬಲ್‌ಗಳು: ಸಿಲಿಕಾನ್‌ ಸಿಟಿಯ ಸೌಂದರ್ಯಕ್ಕೆ ಕಪ್ಪು ಚುಕ್ಕೆ

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೆಐಎನಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾ ಮೂಲದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಅವರು ಈ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ ಎಂದರು.

‘ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಬಂದಿಳಿಯುವವರಿಗೆ ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟವೇ ಒಂದು ದಿವ್ಯ ಅನುಭೂತಿಯನ್ನು ಮಾಡುವಂತಿರಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ’ ಎಂದು ಅವರು ಬಣ್ಣಿಸಿದರು.

ಕೊರೊನಾ ಭೀತಿಯಿಂದಾಗಿ ಮಕ್ಕಳಿಗೆ ಲಸಿಕೆ ತಪ್ಪಿಸಿದ ಪೋಷಕರು..! ಶುರುವಾಯ್ತು 'ದಡಾರ' ಭೀತಿ..!

ಈ ಸಂದರ್ಭದಲ್ಲಿ ಅಮೆರಿಕದ ‘ಅಕ್ಕ’ ಕನ್ನಡ ಕೂಟಗಳ ಮುಖ್ಯಸ್ಥ ಡಾ. ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ