ಆ್ಯಪ್ನಗರ

ಮಹಮ್ಮದ್ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಪೋಸ್ಟ್ ಘಟನೆಗೆ ಕಾರಣ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್‌ ಅಹಮ್ಮದ್

ಪ್ರವಾದಿ ಮಹಮ್ಮದ್ ಪೈಗಂಬರ್‌ ಬಗ್ಗೆ ಅವಹೇಳನ ಪೋಸ್ಟ್ ಹಾಕಿರುವುದು ಡಿಜೆ ಹಳ್ಳಿ ಗಲಭೆಗೆ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ಹೇಳಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 12 Aug 2020, 4:42 pm
ಬೆಂಗಳೂರು: ಪ್ರವಾದಿ ಮುಹಮ್ಮದ್ ಪೈಗಂಬರ್‌ ಕುರುತಾಗಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದು ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಗೆ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದ್ದಾರೆ.
Vijaya Karnataka Web dj halli


ಪ್ರವಾದಿ ಮಹಮ್ಮದ್ ಕುರಿತಾಗಿ ಅವಹೇಳನಕಾರಿ ಪೋಸ್ಟ್ ಮಾಡಿದ್ದವರ ವಿರುದ್ಧ ಸ್ಥಳೀಯರು ದೂರು ನೀಡಿದ್ದರು. ಆದರೆ ಪೊಲೀಸರು ದೂರು ತೆಗೆದುಕೊಳ್ಳುವುದಕ್ಕೆ ತಡ ಮಾಡಿದ್ದಾರೆ. ಇದು ತಪ್ಪು, ಇದರಿಂದ ಅಲ್ಲಿನ ಕೆಲವರು ಉದ್ರಿಕ್ತರಾಗಿ ಗಲಾಟೆ ಮಾಡಿದ್ದಾರೆ ಎಂದರು.

ಡಿಜೆ ಹಳ್ಳಿ ಗಲಭೆಗೆ ಪೊಲೀಸರ ನಿರ್ಲಕ್ಷ್ಯ ವರ್ತನೆ ಕಾರಣವಂತೆ ! ಖಾಕಿ ಮೇಲೆಯೇ ಎಸ್‌ಡಿಪಿಐ ಆರೋಪ

ಇನ್ನು ಕಾವಲಭೈರಸಂದ್ರ ಘಟನೆ ನಡೆದಿರುವುದು ಬೇಸರದ ವಿಚಾರ, ಘಟನೆ ನಡಿಬಾರದಿತ್ತು, ಆದರೆ ಈಗ ಆಗಿ ಹೋಗಿದೆ. ಮಂಗಳವಾರ ರಾತ್ರಿಯೇ ಘಟನೆ ಬಗ್ಗೆ ನಮ್ಮ ಶಾಸಕರು ಮಾತನಾಡಿದ್ದಾರೆ. ಯಾರೇ ಘಟನೆಯಲ್ಲಿ ಭಾಗಿಯಾಗಿದ್ದರು ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಗಲಾಟೆ ನಡೆಸಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದರು. ಗಲಭೆಯಲ್ಲಿ ಹಲವು ಪೊಲೀಸ್ ವಾಹನಗಳಿಗೆ ಬೆಂಕಿ ಕೊಡಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ನಡೆಸಿದ್ದ ಫೈರಿಂಗ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ