ಆ್ಯಪ್ನಗರ

‘ಪ್ರೀತಿಯ ಅಕ್ಕಾ.. ಕನ್ನಡಿಯ ಮುಂದೆ ನಿಂತು ಇನ್ನೊಮ್ಮೆ ಹೇಳಿ’ ಕರಂದ್ಲಾಜೆಗೆ ಕುಸುಮಾ ಟಾಂಗ್‌

ಡಿಕೆ ರವಿ ಆತ್ಮಹತ್ಯೆ ಮಾಡಿಕೊಂಡಾಗ ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನವನ್ನುಂಟು ಮಾಡಿತ್ತು. ರಾಜಕೀಯ ಸ್ವರೂಪ ಪಡೆದುಕೊಂಡಿದ್ದ ಈ ಪ್ರಕರಣದಲ್ಲಿ ಆಗಿನ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಯುದ್ಧ ನಡೆಸಿತ್ತು.

Vijaya Karnataka Web 15 Dec 2022, 3:55 pm
ಬೆಂಗಳೂರು: ಉಪಚುನಾವಣೆಗೆ ಕಾವು ರಂಗೇರಿದೆ. ಬೆಂಗಳೂರಿನ ಆರ್‌ಆರ್‌ನಗರ ಕ್ಷೇತ್ರ ಹಲವು ಕಾರಣಗಳಿಗಾಗಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿ ಈಗಾಗಲೇ ಪ್ರಚಾರ ಆರಂಭಿಸಿದೆ.
Vijaya Karnataka Web kusuma


ಈ ಮಧ್ಯೆ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ವಿರುದ್ಧ ಹೇಳಿಕೆ ನೀಡಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಕುಸುಮಾ ನಯವಾಗಿಯೇ ಚಾಟಿ ಬೀಸಿದ್ದಾರೆ. ಇತ್ತೀಚೆಗೆ ಶೋಭಾ ಕರಂದ್ಲಾಜೆ, ಡಿಕೆ ರವಿಯ ಹೆಸರನ್ನು ಯಾರೇ ಬಳಸಿದರೂ ಅವರಿಗೆ ಒಳ್ಳೆಯದಾಗಲ್ಲ ಎಂದು ಹೇಳಿಕೆ ನೀಡಿದ್ದರು.ಈ ಮಾತು ಪರವಿರೋಧಕ್ಕೆ ಕಾರಣವಾಗಿತ್ತು.

ಸುಳ್ಳು ಪ್ರಮಾಣ ಪತ್ರ ನೀಡಿ ಸೈಟ್‌ ಪಡೆಯಲು ಯತ್ನಿಸಿದವರ ವಿರುದ್ಧ ಕೇಸ್‌

ಇದೀಗ ಸಂಸದೆಯ ಮಾತಿಗೆ ನಯವಾಗಿ ತಿರುಗೇಟು ಕೊಟ್ಟಿರುವ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ, ಪ್ರೀತಿಯ ಅಕ್ಕ, ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು? ಮಾಡುತ್ತಿರುವವರು ಯಾರು? ಎನ್ನುವುದನ್ನು ಇಡೀ ದೇಶವೇ ನೋಡಿದೆ. ನೋಡುತ್ತಿದೆ. ಈ ಸಂದರ್ಭದಲ್ಲಿ ನನಗೆ ಅಕ್ಕ ಮಹಾದೇವಿಯವರ “ನೊಂದವರ ನೋವ ನೋಯದವರೆತ್ತ ಬಲ್ಲರೊ?” ಎಂಬ ವಚನ ನೆನಪಿಗೆ ಬರುತಿದೆ. ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ! ಇದು ನಿಮಗೆ ನೀವೇ ಹೇಳಿದಂತೆ ಇದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗಬಹುದು. ಎಂದು ಹೇಳಿದ್ದಾರೆ.

ಹೊಸಕೋಟೆಯ ಧಮ್‌ ಬಿರಿಯಾನಿಗಾಗಿ ಒಂದೂವರೆ ಕಿಲೋಮೀಟರ್‌ ಉದ್ದದ ಕ್ಯೂ..!

ಡಿಕೆ ರವಿ ಆತ್ಮಹತ್ಯೆ ಮಾಡಿಕೊಂಡಾಗ ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನವನ್ನುಂಟು ಮಾಡಿತ್ತು. ರಾಜಕೀಯ ಸ್ವರೂಪ ಪಡೆದುಕೊಂಡಿದ್ದ ಈ ಪ್ರಕರಣದಲ್ಲಿ ಆಗಿನ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಯುದ್ಧ ನಡೆಸಿತ್ತು. ಡಿಕೆ ರವಿ ಆತ್ಮಹತ್ಯೆ ಕೇಸ್‌ನಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದವರಲ್ಲಿ ಶೋಭಾ ಕರಂದ್ಲಾಜೆ ಮುಂಚೂಣಿಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ