ಆ್ಯಪ್ನಗರ

ಪಿಜಿ, ಹಾಸ್ಟೆಲ್‌ ತೊರೆಯುವಂತೆ ಒತ್ತಡ ಹೇರಿದರೆ ಕಾನೂನು ಕ್ರಮ-ಬೆಂಗಳೂರು ಪೊಲೀಸರ ಎಚ್ಚರಿಕೆ

ದೇಶಾದ್ಯಂತ ಸಂಪೂರ್ಣ ಲಾಕ್‌ಡೌನ್ ಇರುವ ಈ ಸಂದರ್ಭದಲ್ಲಿ ಪಿಜಿ ಹಾಗೂ ಹಾಸ್ಟೆಲ್‌ ತೊರೆಯುವಂತೆ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಿಗಳಿಗೆ ಒತ್ತಡ ಹೇರಿದರೆ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನೀಡಿದ್ದಾರೆ.

Vijaya Karnataka Web 26 Mar 2020, 1:34 pm
ಬೆಂಗಳೂರು: ಪಿ.ಜಿ ಹಾಗೂ ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳನ್ನು ಖಾಲಿ ಮಾಡುವಂತೆ ಒತ್ತಡ ಹೇರುವುದು ಕಾನೂನು ಬಾಹಿರ ಅಪರಾಧ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web bengaluru police commistior


ಬೆಂಗಳೂರು ನಗರದ ಪಿ.ಜಿ ಹಾಗೂ ಹಾಸ್ಟೆಲ್‌ಗಳಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ವಿದ್ಯಾರ್ಥಿಗಳು, ಉದೋಗಸ್ಥರು ಉಳಿದುಕೊಂಡಿದ್ದಾರೆ. ಕೊರೊನಾ ಕಾರಣದಿಂದಾಗಿ ಅವರನ್ನು ಪಿಜಿ ಹಾಗೂ ಹಾಸ್ಟೆಲ್ ಬಿಟ್ಟು ಹೋಗುವಂತೆ ಸೂಚನೆ ನೀಡಲಾಗುತ್ತಿದೆ.

ಕೊರೊನಾ ವಿರುದ್ಧ ಹೋರಾಟ: ಪರಿಹಾರ ನಿಧಿಗೆ 2 ಕೋಟಿ ರೂ. ನೀಡಿದ ನಟ ಪವನ್ ಕಲ್ಯಾಣ್‌!


ಕೆಲವು ವಿದ್ಯಾರ್ಥಿಗಳನ್ನು ಬಲವಂತವಾಗಿ ಹೊರಗಡೆ ಹಾಕಿರುವ ಪ್ರಕರಣಗಳು ನಡೆಯುತ್ತಿದೆ. ಇದರಿಂದ ಅನಿವಾರ್ಯವಾಗಿ ತಮ್ಮ ಊರಿನ ಕಡೆ ವಿದ್ಯಾರ್ಥಿಗಳು ಪ್ರಯಾಣ ಮಾಡಬೇಕಾಗಿದೆ. ಆದರೆ ಗಡಿಗಳು ಸಂಫೂರ್ಣ ಬಂದ್ ಆಗಿರುವುದರಿಂದ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪಿಜಿ ಹಾಗೂ ಹಾಸ್ಟೆಲ್‌ಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಪಿಜಿ ಹಾಗೂ ಹಾಸ್ಟೆಲ್ ತೊರೆಯುವಂತೆ ಮಾಡುವಂತೆ ಒತ್ತಡ ಹೇರಬಾರದು ಎಂದು ಸೂಚಿಸಿದ್ದಾರೆ.

ಅಲ್ಲದೆ ಪಿಜಿ, ಹಾಸ್ಟೆಲ್‌ನಲ್ಲಿ ಇರುವವರಿಗೆ ಊಟ, ತಿಂಡಿಯನ್ನು ನೀಡಬೇಕು ಇಲ್ಲದಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ