ಆ್ಯಪ್ನಗರ

ಧೂಮಪಾನಕ್ಕೆ ಅವಕಾಶ ಕೊಟ್ರೆ ಹೋಟೆಲ್‌ ಪರವಾನಗಿ ರದ್ದು

ಕರ್ನಾಟಕ ಧೂಮಪಾನ ನಿಷೇಧ ಹಾಗೂ ಧೂಮಪಾನಿಗಳಲ್ಲದವರ ಆರೋಗ್ಯ ರಕ್ಷಣೆ ಕಾಯಿದೆಯಂತೆ ನಗರದ ಎಲ್ಲ ದರ್ಶಿನಿಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳು, ಹೋಟೆಲ್‌, ಪಬ್‌, ಕ್ಲಬ್‌ಗಳು ಮತ್ತು ಸಾರ್ವಜನಿಕ ಸ್ಥಳವನ್ನು ಧೂಮಪಾನ ಮುಕ್ತ ಪ್ರದೇಶವೆಂದು ಘೋಷಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ, ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

Vijaya Karnataka 30 Aug 2018, 11:28 am
ಬೆಂಗಳೂರು: ಕರ್ನಾಟಕ ಧೂಮಪಾನ ನಿಷೇಧ ಹಾಗೂ ಧೂಮಪಾನಿಗಳಲ್ಲದವರ ಆರೋಗ್ಯ ರಕ್ಷಣೆ ಕಾಯಿದೆಯಂತೆ ನಗರದ ಎಲ್ಲ ದರ್ಶಿನಿಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳು, ಹೋಟೆಲ್‌, ಪಬ್‌, ಕ್ಲಬ್‌ಗಳು ಮತ್ತು ಸಾರ್ವಜನಿಕ ಸ್ಥಳವನ್ನು ಧೂಮಪಾನ ಮುಕ್ತ ಪ್ರದೇಶವೆಂದು ಘೋಷಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ, ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.
Vijaya Karnataka Web smoking


ಹೋಟೆಲ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮಾಲೀಕರು ಕಾನೂನಾತ್ಮಕವಾಗಿ ಧೂಮಪಾನ ವಲಯವನ್ನು ಸ್ಥಾಪಿಸಲು ಪಾಲಿಕೆಯ ತಂಬಾಕು ನಿಯಂತ್ರಣ ಕೋಶದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಧೂಮಪಾನ ವಲಯದಲ್ಲಿ ಯಾವುದೇ ರೀತಿಯ ತಿಂಡಿ, ಊಟ, ಮದ್ಯ, ಸಿಗರೇಟು, ನೀರು, ಟೀ, ಕಾಫಿ ಇತ್ಯಾದಿ ಪದಾರ್ಥಗಳನ್ನು ಸರಬರಾಜು ಮಾಡಬಾರದು. ಕೋಪ್ಟಾ ಕಾಯಿದೆ ಅನ್ವಯ 30ಕ್ಕೂ ಹೆಚ್ಚು ಆಸನಗಳಿರುವ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಹೋಟೆಲ್‌, ಪಬ್‌, ಕ್ಲಬ್‌ಗಳಲ್ಲಿ ಧೂಮಪಾನ ವಲಯವನ್ನು ಸ್ಥಾಪಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಪ್ರಾಪ್ತರು ಮತ್ತು ಧೂಮಪಾನ ಮಾಡದ ಸಾರ್ವಜನಿಕರಿಗೆ ಧೂಮಪಾನ ವಲಯಕ್ಕೆ ಪ್ರವೇಶ ನೀಡಬಾರದು. ಅಲ್ಲಿ ಕುರ್ಚಿ, ಬೆಂಕಿ ಪೊಟ್ಟಣ, ಆಶ್‌ ಟ್ರೇ ಇತ್ಯಾದಿ ಧೂಮಪಾನ ಪ್ರಚೋದನಕಾರಿ ವಸ್ತುಗಳನ್ನು ಗ್ರಾಹಕರಿಗೆ ಒದಗಿಸಬಾರದು. ಈ ನಿಯಮಗಳನ್ನು ಉಲ್ಲಂಘಿಸಿದರೆ, ಉದ್ದಿಮೆ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಸೂಚಿಸಲಾಗಿದೆ.

ನಗರದ ಬಹುತೇಕ ಬಾರ್‌ ಅಂಡ್‌ ರೆಸ್ಟೋರೆಂಟ್‌, ಕ್ಲಬ್‌ಗಳಲ್ಲಿ ಧೂಮಪಾನ ಮಾಡುವುದು ಸಾಮಾನ್ಯವಾಗಿದೆ. ಟೀ ಅಂಗಡಿಗಳ ಮುಂದೆ ಸಿಗರೇಟು ಸೇದಲಾಗುತ್ತದೆ. ಇದರಿಂದ ಇತರ ಜತೆಗೆ ತೊಂದರೆಯಾಗುತ್ತಿದ್ದರೂ ಅದೇ ಚಾಳಿ ಮುಂದುವರಿಸಿಕೊಂಡು ಬರಲಾಗುತ್ತಿದೆ. ವ್ಯಾಪಾರ ನಡೆಯುತ್ತದೆ ಎಂಬ ಕಾರಣಕ್ಕೆ ದರ್ಶಿನಿ ಹಾಗೂ ಟೀ ಅಂಗಡಿ ಮಾಲೀಕರು ಕೂಡ ಇದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಧೂಮಪಾನ ವಲಯ ಎಂದು ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಸಿಗರೇಟು ಸೇದಬೇಕು. ಅಲ್ಲಿ ಅಪ್ರಾಪ್ತರಿಗೆ ಅವಕಾಶ ಮಾಡಿಕೊಡಬಾರದು. ಈ ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದಾಗಲಿದೆ ಎಂದು ಬಿಬಿಎಂಪಿ ಎಚ್ಚರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ