ಆ್ಯಪ್ನಗರ

ಬೆಂಗಳೂರಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ ತನಕ ಮತ್ತೆ ಲಾಕ್‌ಡೌನ್‌..!

ಈ ಬಗ್ಗೆ ಬಿಬಿಎಂಪಿ ಆಯುಕ್ತರಾಗಿರುವ ಮಂಜುನಾಥ್ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ತಿಳಿಸಿದ್ದು, ‘ಬೆಂಗಳೂರಿನಲ್ಲಿ ಇಂದು ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯ ವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಅಗತ್ಯ ಸೇವೆಗಳಿಗೆ ಹೊರತು ಪಡಿಸಿ, ಅನವಶ್ಯಕವಾಗಿ ಓಡಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’ ಎಂದು ತಿಳಿಸಿದ್ದಾರೆ.

Vijaya Karnataka Web 25 Jul 2020, 7:51 pm
ಬೆಂಗಳೂರು: ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಕಳೆದ ವಾರ ಏಳು ದಿನಗಳ ಕಾಲ ರಾಜ್ಯ ಸರ್ಕಾರ ಅನೇಕ ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಿತ್ತು. ಜನರು ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡುವದನ್ನು ತಡೆಹಿಡಿಯುವ ಮೂಲಕ ಕೊರೊನಾ ಪಾಸಿಟಿವ್ ಪ್ರಕರಣಗಳ ನಿಯಂತ್ರಣವನ್ನು ಮಾಡಬಹುದು ಅನ್ನುವ ಲೆಕ್ಕಾಚಾರದಿಂದ ಒಂದು ವಾರಗಳ ಕಾಲ ಮಾಡಿದ ಲಾಕ್‌ಡೌನ್‌ ನಂತರ ಮುಂದುವರಿಯಲಿಲ್ಲ.
Vijaya Karnataka Web VIDHANA SOUDHA


ಕೊರೊನಾ ಸೋಂಕಿತರಿಗೆ ವರದಾನವಾದ ಪ್ಲಾಸ್ಮಾ ಥೆರಪಿ! ಪ್ಲಾಸ್ಮಾ ದಾನ ಮಾಡುವುದು ಹೇಗೆ?

ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಂದ ಸೋಮವಾರ ಮುಂಜಾನೆ ತನಕ ಮತ್ತೆ ಲಾಕ್‌ಡೌನ್ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರಾಗಿರುವ ಮಂಜುನಾಥ್ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ತಿಳಿಸಿದ್ದು, ‘ಬೆಂಗಳೂರಿನಲ್ಲಿ ಇಂದು ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯ ವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಅಗತ್ಯ ಸೇವೆಗಳಿಗೆ ಹೊರತು ಪಡಿಸಿ, ಅನವಶ್ಯಕವಾಗಿ ಓಡಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’ ಎಂದು ತಿಳಿಸಿದ್ದಾರೆ.


ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ 500 ಬೆಡ್, 10 ವೆಂಟಿಲೇಟರ್‌,

ಶನಿವಾರ ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ 5 ರ ತನಕ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇರಲಿದ್ದು, ನಾಳೆ ಭಾನುವಾರ ಆಗಿರುವುದರಿಂದ ಅಲ್ಲದೇ, ಬೆಂಗಳೂರಿನಲ್ಲಿ ಅತೀ ಹೆಚ್ಚು ಜನಸಂಖ್ಯೆ ಇರುವುದರಿಂದ ಜನರು ಹೆಚ್ಚಾಗಿ ಓಡಾಟ ನಡೆಸುತ್ತಾರೆ. ಈ ವೇಳೆ ಸಾರ್ವಜನಿಕ ಪ್ರದೇಶಗಳಲ್ಲಿ ಗುಂಪುಗೂಡುವುರಿಂದ ಕೊರೊನಾ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಭಾನುವಾರ ಪೂರ್ತಿ ದಿನ ಲಾಕ್‌ಡೌನ್‌ ಇರಲಿದೆ.

ವರಮಹಾಲಕ್ಷ್ಮಿ ಹಬ್ಬಕ್ಕೆ ಗೊರವನಹಳ್ಳಿ ಲಕ್ಷ್ಮಿ ದೇವಾಲಯ ಬಂದ್‌

ಇನ್ನೊಂದೆಡೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ರಾಜ್ಯಗಳ ಜಿಲ್ಲೆಗಳ ಪೈಕಿ ರಾಜಧಾನಿ ಮೊದಲ ಸ್ಥಾನಗಲ್ಲಿದೆ. ಹೀಗಾಗಿ ಲಾಕ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗ್ತಿದೆ. ಜೊತೆಗೆ ಪ್ರತೀ ಭಾನುವಾರ ಲಾಕ್‌ಡೌನ್ ಜಾರಿ ಮಾಡಲಾಗುತ್ತೆ ಅನ್ನುವ ಮಾತುಗಳು ಕೂಡ ಕೇಳಿ ಬರ್ತಿದೆ. ಈ ಹಿಂದೆ ಇದ್ದಂತೆ ಲಾಕ್‌ಡೌನ್‌ ವೇಳೆ ಭಾನುವಾರ ಇಡೀ ದಿನ ಅಗತ್ಯ ವಸ್ತುಗಳ ಹೊರತಾಗಿ ಬೇರೆ ಯಾವುದೇ ವಸ್ತುಗಳು ಜನರಿಗೆ ಸಿಗುವುದಿಲ್ಲ, ಜನರು ಓಡಾಟ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ