ಆ್ಯಪ್ನಗರ

ಬೆಂಗಳೂರು ಲಾಕ್‌ಡೌನ್: ಕೊರೊನಾ ಭಯದಲ್ಲಿ ಸ್ತಬ್ಧವಾದ ಸಿಲಿಕಾನ್‌ ಸಿಟಿ

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬೆಂಗಳೂರು ನಗರದಲ್ಲಿ ಮಂಗಳವಾರ ರಾತ್ರಿ 8 ಗಂಟೆಯಿಂದ ಲಾಕ್‌ಡೌನ್ ಜಾರಿಗೊಂಡಿದೆ. ಬುಧವಾರ ನಗರ ಬಹುತೇಕ ಸ್ತಬ್ಧಗೊಂಡಿದ್ದು ವಾಹನ ಸಂಚಾರ ವಿರಳವಾಗಿದೆ.

Vijaya Karnataka Web 15 Jul 2020, 9:48 am
ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬೆಂಗಳೂರು ನಗರದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಂಡಿದೆ. ಬುಧವಾರ ಲಾಕ್‌ಡೌನ್ ಪರಿಣಾಮ ನಗರ ಬಹುತೇಕ ಸ್ತಬ್ಧಗೊಂಡಿದೆ. ಬೆಳಗ್ಗೆ ಕೆಲವೊಂದು ವಾಹನಗಳು ರಸ್ತೆಗಿಳಿದಿದ್ದರೂ ಜನಸಂಚಾರ ಹಾಗೂ ವಾಹನಗಳ ಓಡಾಟ ಕಡಿಮೆ ಇದೆ.
Vijaya Karnataka Web lockdown bengaluru


ಮಂಗಳವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ಸಂಪೂರ್ಣ ಲಾಕ್‌ಡೌನ್ ಆರಂಭಗೊಂಡಿದೆ. ಇನ್ನು ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಯಲ್ಲಿದೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಲಾಕ್‌ಡೌನ್‌ ಕಟ್ಟುನಿಟ್ಟಿನಲ್ಲಿ ಜಾರಿಗೆ ತರುವಂತೆ ಸಿಎಂ ಬಿ.ಎಸ್‌ ಯಡಿಯೂರಪ್ಪ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದ್ದಾರೆ.

ಮತ್ತೆ ಮುಂದುವರಿದ ವಲಸೆ, ಮಂಗಳವಾರ ಬೆಂಗಳೂರು ಬಿಟ್ಟ 26 ಸಾವಿರ ಮಂದಿ !

ಲಾಕ್‌ಡೌನ್ ಪರಿಣಾಮ ನಗರದ ಪ್ರಮುಖ ರಸ್ತೆಗಳನ್ನು ಮುಚ್ಚಲಾಗಿದೆ. ಬಹುತೇಕ ರಸ್ತೆಗಳಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್‌ ತಪಾಸಣೆಗಳನ್ನು ಬಿಗಿಗೊಳಿಸಲಾಗಿದೆ. ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಅನಗತ್ಯವಾಗಿ ಓಡಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಕೊಡಲಾಗುತ್ತಿದೆ.

'ಸಿವಿಲ್‌ ಪೊಲೀಸ್ ವಾರ್ಡನ್' ಆಗಲು ಬೆಂಗಳೂರಿನ ಯುವಜನತೆಗೆ ಪೊಲೀಸ್ ಕಮಿಷನರ್ ಆಹ್ವಾನ!

ಇನ್ನು ಕೆಲವು ಕಡೆಗಳಲ್ಲಿ ಹೋಟೆಲ್‌ ಹಾಗೂ ಅಗತ್ಯ ವಸ್ತುಗಳ ಖರೀದಿ ಅಂಗಡಿಗಳು ತೆರೆದಿಡಲಾಗಿದೆ. ಬೆಳಗ್ಗೆ 7 ರಿಂದ ಮಧ್ಯಾಹ್ಮ 12 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ರೀತಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸುವ ಮೂಲಕ ಕೊರೊನಾ ಹರಡುತ್ತಿರುವ ವೇಗವನ್ನು ನಿಯಂತ್ರಣ ಮಾಡುವುದು ಸರ್ಕಾರದ ಯೋಚನೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ