ಆ್ಯಪ್ನಗರ

ಹುಳಿಮಾವು ಕೆರೆ ಅನಾಹುತ: ಲೋಕಾಯುಕ್ತರಿಂದ ಸ್ಥಳ ಪರಿಶೀಲನೆ; ಬಿಬಿಎಂಪಿಗೆ 2 ವಾರ ಗಡುವು

ಹುಳಿಮಾವು ಕೆರೆ ಅನಾಹುತ ಘಟನೆ ಸಂಬಂಧ ಲೋಕಾಯುಕ್ತರು ಸ್ಥಳಕ್ಕೆ ಭೇಟಿ ನೀಡಿದ್ದರು. ಅಲ್ಲದೆ, ಬಿಬಿಎಂಪಿ ಆರೋಗ್ಯ ಇಲಾಖೆಗೆ ತರಾಟೆಗೆ ತೆಗೆದುಕೊಂಡ ಲೋಕಾಯುಕ್ತ ನ್ಯಾಯಮೂರ್ತಿ, ಘಟನೆ ಬಗ್ಗೆ ವಿವರಣೆ ಕೇಳಿ ಗಡುವು ನೀಡಿದ್ದಾರೆ.

Vijaya Karnataka Web 26 Nov 2019, 2:08 pm
ಬೆಂಗಳೂರು: ಹುಳಿಮಾವು ಕೆರೆ ಕೋಡಿ ಒಡೆದು ನೂರಾರು ಮನೆಗಳು ಜಲಾವೃತಗೊಂಡಿದ್ದವು. ಈ ಸಂಬಂಧ ಲೋಕಾಯುಕ್ತರು ಡಿಸೆಂಬರ್ 10ರೊಳಗೆ ವರದಿ ನೀಡಲು ಆದೇಶಿಸಿದ್ದಾರೆ.
Vijaya Karnataka Web hulimavu lake breach


ಹುಳಿಮಾವು ಕೆರೆಯ ಪುನರುಜ್ಜೀವನಕ್ಕಾಗಿ ಶ್ರೀ ದೊರೆಸ್ವಾಮಿಯವರ ನೇತ್ವತ್ವದಲ್ಲಿ ಸಲ್ಲಿಸಿದ್ದ ದೂರಿನ ಮೇಲೆ ಹುಳಿಮಾವು ಕೆರೆಯನ್ನು ಪರಿಶೀಲಿಸಿದ ಲೋಕಾಯುಕ್ತರು ಘಟನೆ ಸಂಬಂಧ ಕ್ರಮ ಕೈಗೊಂಡು ವರದಿ ನೀಡಲು ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೆ 2 ವಾರಗಳ ಗಡುವು ನೀಡಿ ಆದೇಶಿಸಿದ್ದಾರೆ.

ನಿಮ್ಮ ಕೆಲಸ ನೀವು ಸರಿಯಾಗಿ ಮಾಡದಿದ್ದರೆ ನನ್ನ ಕೆಲಸವನ್ನು ನಾನು ಮಾಡಬೇಕಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್‌ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿ: ಹುಳಿಮಾವು ಕೆರೆ ಅನಾಹುತಕ್ಕೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ: ಸಿಎಂಗೆ ರಾಜೀವ್‌ ಚಂದ್ರಶೇಖರ್‌ ಪತ್ರ

ಪ್ರಕರಣದ ತನಿಖೆ ನಡೆಸುವಂತೆ ಬಿಬಿಎಂಪಿಗೆ ನೋಟಿಸ್‌ ನೀಡಿದ್ದೇನೆ. ಈವರೆಗೆ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ತನಿಖೆಯ ನಂತರ ತಪ್ಪಿತಸ್ಥರ ಪತ್ತೆಯಾಗಲಿದೆ. ಅವಘಡಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದರು.

ಇದನ್ನೂ ಓದಿ: ಇದೂ ಬೆಂಗಳೂರಾ? ರಾಜಧಾನಿಯ ಪ್ರವಾಹದ ಅಬ್ಬರ ನೋಡಿದ್ರೆ ಆಶ್ಚರ್ಯವಾಗುತ್ತೆ!

ಇನ್ನು, ಪರಿಹಾರ ಕಾರ್ಯ ಚುರುಕುಗೊಳಿಸಬೇಕು. ಶಾಲೆಗೆ ಹೋಗಲು ಮಕ್ಕಳಿಗೆ ತೊಂದರೆ ಆಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ನಿಷ್ಪಕ್ಷಪಾತವಾಗಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದೂ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್‌ ಶೆಟ್ಟಿ ಸೂಚಿಸಿದ್ದಾರೆ.

ಭಾರಿ ಮಳೆಗೆ ತುಂಬಿ ಹರಿದ ಬೆಂಗಳೂರಿನ 9 ಕೆರೆಗಳು

ಇನ್ನು, ಈ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 10ರಂದು ಮಧ್ಯಾಹ್ನ 3 ಗಂಟೆಗೆ ಲೋಕಾಯುಕ್ತರ ಮುಂದೆ ನಿಗದಿಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ