ಆ್ಯಪ್ನಗರ

ನೆಲಮಂಗಲ: ಪೇಂಟ್ಸ್‌ ಗೋದಾಮಿನಲ್ಲಿ ಭಾರೀ ಬೆಂಕಿ

ಅಗ್ನಿಶಾಮಕ ದಳದ ಐದಕ್ಕೂ ಹೆಚ್ಚು ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿಯ ಕೆನ್ನಾಲಗೆ ಆಗಸದೆತ್ತರಕ್ಕೆ ಏರಿದ್ದು, ಸುತ್ತಲೂ ಭಾರೀ ಹೊಗೆ ಆವರಿಸಿದೆ. ಮಾದನಾಯಕನಹಳ್ಳಿ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕ ಬೆಂಕಿಯಿಂದ ಪೇಯಿಂಟ್ಸ್ ಆಯಿಲ್ ಬ್ಯಾರಲ್ ಗಳ ಸ್ಪೋಟಗೊಂಡಿವೆ ಎಂದು ಮೂಲಗಳು ತಿಳಿಸಿವೆ.

Vijaya Karnataka Web 13 Feb 2019, 5:44 pm
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ಸಮೀಪದ ಕುದರಗೆರೆ ರಸ್ತೆಯಲ್ಲಿನ ಯುನೈಟೆಡ್ ಪೇಂಟ್ಸ್‌ಗೆ ಸೇರಿದ ಗೋದಾಮಿನಲ್ಲಿ ಬುಧವಾರ ಅಪರಾಹ್ನ ಭಾರೀ ಅಗ್ನಿ ದುರಂತ ಸಂಭವಿಸಿದೆ. ಗೋದಾಮಿನಲ್ಲಿ ಸಿಲಿಂಡರ್‌ ಸ್ಫೋಟಿಸಿದಂತೆ ಭಾರೀ ಸದ್ದು ಕೇಳಿ ಬಂತು. ಬಳಿಕ ಬೆಂಕಿ ಹೊತ್ತಿಕೊಂಡಿತು ಎಂದು ಸ್ಥಳೀಯರು ತಿಳಿಸಿದ್ದಾರೆ.
Vijaya Karnataka Web Fire-1


ಅಗ್ನಿಶಾಮಕ ದಳದ ಐದಕ್ಕೂ ಹೆಚ್ಚು ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿಯ ಕೆನ್ನಾಲಗೆ ಆಗಸದೆತ್ತರಕ್ಕೆ ಏರಿದ್ದು, ಸುತ್ತಲೂ ಭಾರೀ ಹೊಗೆ ಆವರಿಸಿದೆ.

ಮಾದನಾಯಕನಹಳ್ಳಿ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕ ಬೆಂಕಿಯಿಂದ ಪೇಯಿಂಟ್ಸ್ ಆಯಿಲ್ ಬ್ಯಾರಲ್ ಗಳ ಸ್ಪೋಟಗೊಂಡಿವೆ ಎಂದು ಮೂಲಗಳು ತಿಳಿಸಿವೆ.


ಈ ಗೋದಾಮು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಹಿಂಭಾಗದಲ್ಲಿದ್ದು, ಐದು ಎಕರೆ ಪ್ರದೇಶದ ಸುತ್ತಲೂ ಬೆಂಕಿ ಆವರಿಸುತ್ತಿದೆ.


ಗೋದಾಮಿನ ಸಮೀಪದಲ್ಲಿರುವ ಕಾಲೋನಿ, ಬಡಾವಣೆಯ ನಿವಾಸಿಗಳಿಗೆ ಮುಂಜಾಗ್ರತೆ ಕೈಗೊಳ್ಳುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಪಕ್ಕದ ಶ್ರೀಕೃಷ್ಣ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದ್ದು, ಮುಂಜಾಗ್ರತೆಗಾಗಿ ಬಡಾವಣೆ ಮನೆಗಳಲ್ಲಿ ಯಾರೂ ಅನಿಲ ಸಿಲಿಂಡರ್ ಬಳಕೆ ಮಾಡದಂತೆ ಹಾಗೂ ಬೆಲೆಬಾಳುವ ವಸ್ತು, ದಾಖಲೆ ಪತ್ರಗಳನ್ನು ಭದ್ರವಾಗಿಟ್ಟುಕೊಂಡು ಮನೆಯಿಂದ ಹೊರ ಬರುವಂತೆ ಸೂಚನೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ