ಆ್ಯಪ್ನಗರ

ಮಲ್ಲೇಶ್ವರಂ ಸ್ಪೋಟ ನ್ಯಾಯಾಂಗ ನಿಂದನೆ ಸಲ್ಲಿಸಿ ಲಿಷಾ

ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು 2013ರಲ್ಲಿ ನಡೆದ ಸ್ಪೋಟದಲ್ಲಿ ಗಾಯಗೊಂಡಿದ್ದ ಲಿಷಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್‌, ಕೇಂದ್ರ ಗೃಹ ಸಚಿವಾಲಯ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ವಿಕ ಸುದ್ದಿಲೋಕ 13 Jun 2017, 10:00 am
ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು 2013ರಲ್ಲಿ ನಡೆದ ಸ್ಪೋಟದಲ್ಲಿ ಗಾಯಗೊಂಡಿದ್ದ ಲಿಷಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್‌, ಕೇಂದ್ರ ಗೃಹ ಸಚಿವಾಲಯ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.
Vijaya Karnataka Web malleswaram blast lisha submitted contempt of court
ಮಲ್ಲೇಶ್ವರಂ ಸ್ಪೋಟ ನ್ಯಾಯಾಂಗ ನಿಂದನೆ ಸಲ್ಲಿಸಿ ಲಿಷಾ


ಲಿಷಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ.ಜಯಂತ್‌ ಪಟೇಲ್‌ ಮತ್ತು ನ್ಯಾ. ಎನ್‌.ಕೆ.ಸುಧೀಂದ್ರ ರಾವ್‌ ಅವರಿದ್ದ ವಿಭಾಗೀಯ ಪೀಠ, ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಪರ ವಕೀಲರು, ‘‘2016 ರ ಅಕ್ಟೋಬರ್‌ನಲ್ಲಿ ಅರ್ಜಿದಾರರಿಗೆ ಸರಕಾರಿ ಕೆಲಸ ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್ಚಿನ ಪರಿಹಾರ ನೀಡುವ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳುವಂತೆಯೂ ಕೇಂದ್ರ ಸರಕಾರಕ್ಕೆ ನಿರ್ದೇಶಿಸಿತ್ತು. ಆದರೆ, ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡೂ ಕೋರ್ಟ್‌ ಆದೇಶ ಪಾಲನೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ’’ಎಂದು ನ್ಯಾಯಪೀಠಕ್ಕೆ ವಿವರಿಸಿದರು.

‘‘ಈ ಹಿಂದೆ ಅರ್ಜಿದಾರರು ಉದ್ಯೋಗ ಕೋರಿ ಮನವಿ ನೀಡಿದರೆ ಆ ಬಗ್ಗೆ ಪರಿಶೀಲಿಸಲಾಗುವುದು ಎಂದು ರಾಜ್ಯ ಸರಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಅವರು ಮನವಿ ನೀಡಿದ್ದರೂ ಪರಿಗಣಿಸಿಲ್ಲ. ಜತೆಗೆ ಹೆಚ್ಚಿನ ಪರಿಹಾರವನ್ನೂ ನೀಡಿಲ್ಲ. ಕೇಂದ್ರ ಸರಕಾರವೂ ಪರಿಹಾರ ಧನ ಹೆಚ್ಚಳ ಮಾಡಿಲ್ಲ,’’ ಎಂದು ಅವರು ದೂರಿದರು.

‘‘ಉಗ್ರರ ಕೃತ್ಯ, ನಕ್ಸಲರ ದಾಳಿ, ಕೋಮು ಘರ್ಷಣೆ ಮತ್ತಿತರ ಸಂದರ್ಭಗಳಲ್ಲಿ ಗಾಯಗೊಳ್ಳುವವರಿಗೆ ಪರಿಹಾರ ನೀಡಲು ಪ್ರತ್ಯೇಕ ನೀತಿಯನ್ನು ರೂಪಿಸಬೇಕು. ಅಲ್ಲದೆ, ದೇಶದಲ್ಲಿ ಅಪಾಯಕಾರಿ ಸೊಧೀಟಕಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಣೆ ಮಾಡುವುದನ್ನು ತಡೆಯಲು ನೀತಿ ರೂಪಿಸಬೇಕು,’’ ಎಂದೂ ಲಿಷಾ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.

ಸೊಧೀಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಿಷಾಗೆ, ತನ್ನ ಆಸೆಯಂತೆ ವೈದ್ಯ ಪದವಿ ಪಡೆಯಲಾಗಲಿಲ್ಲ. ಜತೆಗೆ ವೈದ್ಯಕೀಯ ವೆಚ್ಚಕ್ಕೆ ಹೆಚ್ಚಿನ ಹಣ ಖರ್ಚು ಮಾಡಲಾಗಿದೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಅಧಿಕ ಪರಿಹಾರ ಕೊಡಿಸಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ