ಆ್ಯಪ್ನಗರ

Covid: ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್‌ ಕಡ್ಡಾಯ

ಮೆಟ್ರೋ ಹಾಗೂ ಬಿಎಂಟಿಸಿಯಲ್ಲಿ ಸಂಚರಿಸುವವರಿಗೆ ಇನ್ಮುಂದೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಜನದಟ್ಟಣೆಯ ಸ್ಥಳಗಳಲ್ಲಿ ಎಚ್ಚರದಿಂದಿರುವಂತೆ ಬಿಬಿಎಂಪಿ ಜನಜಾಗೃತಿ ಮೂಡಿಸಿದೆ. ಆಸ್ಪಪತ್ರೆಗಳ ವ್ಯವಸ್ಥೆ ಬಗ್ಗೆ ಬಿಬಿಎಂಪಿ ಮೇಲ್ವಿಚಾರಣೆ ಮಾಡುತ್ತಿದ್ದು, ಫನಾದೊಂದಿಗೆ ಚರ್ಚಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಹೇಳಿದ್ದಾರೆ.

Edited byಸೌಮ್ಯಶ್ರೀ ಮಾರ್ನಾಡ್ | Vijaya Karnataka Web 24 Dec 2022, 7:07 am

ಹೈಲೈಟ್ಸ್‌:

  • ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್‌.ಸತ್ಯವತಿ, ಮಾಸ್ಕ್‌ ಹಾಕಿಕೊಳ್ಳದ ಪ್ರಯಾಣಿಕರಿಗೆ ಚಾಲನಾ ಸಿಬ್ಬಂದಿ ಜಾಗೃತಿ ಮೂಡಿಸಬೇಕು ಎಂದಿದ್ದಾರೆ
  • ಮಾಸ್ಕ್‌ ಹಾಕಿದರೆ ಮಾತ್ರ ಮೆಟ್ರೊ ನಿಲ್ದಾಣ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಮಾಸ್ಕ್‌ ಹಾಕದೆ ಬರುವ ಪ್ರಯಾಣಿಕರನ್ನು ಮೆಟ್ರೊ ನಿಲ್ಧಾಣಗಳಲ್ಲಿ ಭದ್ರತಾ ಸಿಬ್ಬಂದಿ ತಡೆಯುತ್ತಿದ್ದಾರೆ.
  • ಜನದಟ್ಟಣೆ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಓಡಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web namma metro
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್‌ ಮಹಾಮಾರಿ ಸೋಂಕು ಮತ್ತೆ ತೀವ್ರವಾಗುವ ಭೀತಿ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್‌.ಸತ್ಯವತಿ, ಮಾಸ್ಕ್‌ ಹಾಕಿಕೊಳ್ಳದ ಪ್ರಯಾಣಿಕರಿಗೆ ಚಾಲನಾ ಸಿಬ್ಬಂದಿ ಜಾಗೃತಿ ಮೂಡಿಸಬೇಕು. ಚಾಲನಾ ಸಿಬ್ಬಂದಿ ಸೇರಿದಂತೆ ಸಂಸ್ಥೆಯ ಎಲ್ಲ ವರ್ಗದ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಎಂದು ಸೂಚಿಸಿದ್ದಾರೆ.

Dr K Sudhakar- ವಿದೇಶದಲ್ಲಿ ಕೋವಿಡ್ ಹೆಚ್ಚಳ: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯದ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದ ಸಚಿವ ಸುಧಾಕರ್

ಪ್ರಸ್ತುತ ಕೋವಿಡ್‌ ನಿಯಂತ್ರಣದಲ್ಲಿದ್ದರೂ ಜಗತ್ತಿನ ಕೆಲವೊಂದು ದೇಶಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಮುಂಬರುವ ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿಎಚ್ಚರ ವಹಿಸುವ ಅಗತ್ಯವಿದೆ. ಸಮೂಹ ಸಾರಿಗೆ ಪ್ರಯಾಣದ ಸಂದರ್ಭದಲ್ಲಿ ಹೆಚ್ಚು ಜಾಗರೂಕರಾಗಿ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ನೌಕರರು ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ, ಎಂದು ತಿಳಿಸಿದ್ದಾರೆ.

ಮಾಸ್ಕ್‌ ಇಲ್ದಿದ್ರೆ ಎಂಟ್ರಿ ಇಲ್ಲ
ಮಾಸ್ಕ್‌ ಹಾಕಿದರೆ ಮಾತ್ರ ಮೆಟ್ರೊ ನಿಲ್ದಾಣ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಮಾಸ್ಕ್‌ ಹಾಕದೆ ಬರುವ ಪ್ರಯಾಣಿಕರನ್ನು ಮೆಟ್ರೊ ನಿಲ್ಧಾಣಗಳಲ್ಲಿ ಭದ್ರತಾ ಸಿಬ್ಬಂದಿ ತಡೆಯುತ್ತಿದ್ದಾರೆ.

ಕೋವಿಡ್‌ ಸಂಪೂರ್ಣ ತಹಬದಿಗೆ ಬಂದ ನಂತರವೂ ನಮ್ಮ ಮೆಟ್ರೊದಲ್ಲಿ ಮಾಸ್ಕ್‌ ಕಡ್ಡಾಯ ಮಾಡಲಾಗಿತ್ತು. ಹಾಗಾಗಿ, ನಿರಂತರವಾಗಿ ಮೆಟ್ರೊದಲ್ಲಿ ಪ್ರಯಾಣ ಮಾಡುವವರು ಮಾಸ್ಕ್‌ ಹಾಕಿಕೊಂಡೇ ಪ್ರಯಾಣ ಮಾಡುತ್ತಿದ್ದರು. ತಪಾಸಣೆ ಬಳಿಕ ಕೆಲವರು ಪ್ರಯಾಣದ ಸಮಯದಲ್ಲಿ ಮಾಸ್ಕ್‌ ತೆಗೆಯುತ್ತಿದ್ದರು. ಮಾಸ್ಕ್‌ ಧರಿಸದೆಯೇ ಪ್ರಯಾಣಿಸುತ್ತಿದ್ದವರಿಗೆ ಸಿಬ್ಬಂದಿ ಸ್ಥಳಕ್ಕೆ ಬಂದು ಮಾಸ್ಕ್‌ ಧರಿಸುವಂತೆ ಸೂಚಿಸುತ್ತಿದ್ದರು. ಕೆಲವು ತಿಂಗಳಿಂದ ದಂಡ ವಿಧಿಸುವುದನ್ನು ನಿಲ್ಲಿಸಲಾಗಿತ್ತು.

Dr K Sudhakar - ವಿದೇಶಗಳಲ್ಲಿ ಕೋವಿಡ್ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ರಾಜ್ಯದಲ್ಲೂ ಮಾರ್ಗಸೂಚಿ ಬಿಡುಗಡೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌
ಸೋಂಕು ನಿಯಂತ್ರಣಕ್ಕೆ ಪಾಲಿಕೆ ಸಿದ್ಧತೆ
ಬಿಬಿಎಂಪಿ ವ್ಯಾಪ್ತಿಯಲ್ಲಿಕೊರೊನಾ ಸೋಂಕು ತಡೆಗೆ ಎಲ್ಲರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜನದಟ್ಟಣೆ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಓಡಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

ನಗರದಲ್ಲಿಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ಮಾಸ್ಕ್‌ ಧರಿಸಿದರೆ ಶೇ 99ರಷ್ಟು ಸೋಂಕನ್ನು ನಿಯಂತ್ರಿಸಬಹುದಾಗಿದೆ. ಹಾಗಾಗಿ, ಎಲ್ಲರೂ ಮಾಸ್ಕ್‌ ಹಾಕಿಕೊಂಡು ಓಡಾಡಬೇಕು. ನಗರದಲ್ಲಿ ಹಾಸಿಗೆಗಳು ಎಷ್ಟಿವೆ, ಐಸಿಯು, ಎಚ್‌ಡಿಯು, ವೆಂಟಿಲೇಟರ್‌ ಹಾಸಿಗೆಗಳು ಎಷ್ಟಿವೆ, ಆಮ್ಲಜನಕ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಫನಾದೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಗಿದೆ. ವೆಂಟಿಲೇಟರ್‌ಗಳು ಕಾರ್ಯನಿರ್ವಹಿಸುತ್ತಿವೆಯೇ ಅಥವಾ ಇಲ್ಲವೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ,’’ ಎಂದು ಹೇಳಿದರು.

‘‘ಪಾಲಿಕೆಯು ಪ್ರತಿಯೊಂದು ವಾರ್ಡ್‌ಗಳಲ್ಲೂ ಜಲಮಂಡಳಿಯ ಸಕ್ಕಿಂಗ್‌ ಮತ್ತು ಜೆಟ್ಟಿಂಗ್‌ ಯಂತ್ರದಿಂದ ಕೊಳಚೆ ನೀರಿನ ಮಾದರಿ ಸಂಗ್ರಹಿಸಿ, ವಿಶ್ಲೇಷಣೆ ಮಾಡಲಾಗುವುದು. ಈ ಕ್ರಮದಿಂದ ಕೋವಿಡ್‌ ಸೋಂಕಿತ ಪ್ರಕರಣಗಳ ಪತ್ತೆ ಸುಲಭವಾಗಲಿದೆ,’’ ಎಂದು ತಿಳಿಸಿದರು.

ಕೋವಿಶೀಲ್ಡ್‌ ಲಸಿಕೆ ಪೂರೈಕೆಗೆ ಮನವಿ
‘‘ಕೋ-ವ್ಯಾಕ್ಸಿನ್‌ ಬೂಸ್ಟರ್‌ ಡೋಸ್‌ನ ಲಭ್ಯತೆ ಇದೆ. ಆದರೆ, ಕೋವಿಶೀಲ್ಡ್‌ ಲಸಿಕೆ ಲಭ್ಯವಿಲ್ಲ. ಹೀಗಾಗಿ, ಅಗತ್ಯ ಲಸಿಕೆಗಳನ್ನು ಪೂರೈಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ಮೂರು ಅಲೆಗಳ ಸಂದರ್ಭದಲ್ಲಿ 9 ಲಕ್ಷ ಮಂದಿ ಮಾತ್ರ ಕೋ-ವ್ಯಾಕ್ಸಿನ್‌ ಲಸಿಕೆ ಪಡೆದುಕೊಂಡಿದ್ದಾರೆ. ಶೇ 90ರಷ್ಟು ಕೋವಿಶೀಲ್ಡ್‌ ಲಸಿಕೆ ಹಾಕಿಸಿಕೊಂಡಿದ್ದಾರೆ. ಕೋವಿಡ್‌ನ ಒಂದು ಮತ್ತು ಎರಡನೇ ಡೋಸ್‌ ಲಸಿಕೆ ಪಡೆದಿರುವವರಿಗೆ ಬೂಸ್ಟರ್‌ ಡೋಸ್‌ ಹಾಕಿಸಿಕೊಳ್ಳುವಂತೆ ಮನವೊಲಿಸಲಾಗುವುದು,’’ ಎಂದರು.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ