ಆ್ಯಪ್ನಗರ

ಮೆಟ್ರೊ ಸಿಬ್ಬಂದಿ ಮುಷ್ಕರ ಮಾಡುವಂತಿಲ್ಲ: ಸರಕಾರ

ಮೆಟ್ರೊ ಸಿಬ್ಬಂದಿ ಮತ್ತು ಅಧಿಕಾರಿಗಳು ಕೆಲಸ ಸ್ಥಗಿತಗೊಳಿಸುವುದನ್ನು ನಿಷೇಧಿಸಿ ರಾಜ್ಯ ಸರಕಾರ ಅಧಿಸೂಚನೆ ಪ್ರಕಟಿಸಿದೆ.

ವಿಕ ಸುದ್ದಿಲೋಕ 7 Jul 2017, 3:20 pm
ಬೆಂಗಳೂರು: ನಗರದ ಮೆಟ್ರೊ ರೈಲು ನಿಗಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಅಧಿಕಾರಿಗಳು ಯಾವುದೇ ರೀತಿಯ ಮುಷ್ಕರ ಹೂಡಿ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸುವುದು ಮತ್ತು ಕೆಲಸ ಸ್ಥಗಿತಗೊಳಿಸುವುದನ್ನು ನಿಷೇಧಿಸಿ ರಾಜ್ಯ ಸರಕಾರ ಅಧಿಸೂಚನೆ ಪ್ರಕಟಿಸಿದೆ.
Vijaya Karnataka Web metro crew can not stop work government notification
ಮೆಟ್ರೊ ಸಿಬ್ಬಂದಿ ಮುಷ್ಕರ ಮಾಡುವಂತಿಲ್ಲ: ಸರಕಾರ


ಹಾಗೇನಾದರೂ ಮಾಡಿದಲ್ಲಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯಿದೆ -2013ರ ಕಲಂನಡಿ ಕ್ರಮ ಕೈಗೊಳ್ಳಲು ಅವಕಾಶವಿರುತ್ತದೆ ಎಂದು ಸರಕಾರದ ಉಪ ಕಾರ್ಯದರ್ಶಿ(ನಗರಾಭಿವೃದ್ಧಿ ಇಲಾಖೆ) ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಸಿಬ್ಬಂದಿ ಪ್ರತಿಭಟನೆ ನಡೆಸಿದ ಕಾರಣ ಮೆಟ್ರೊ ಸಂಚಾರ ಸ್ಥಗಿತಗೊಂಡು ಸಾವಿರಾರು ಪ್ರಯಾಣಿಕರು ಪರದಾಡುವಂತಾದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮವನ್ನು ಪ್ರಕಟಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ