ಆ್ಯಪ್ನಗರ

ಬೆಂಗಳೂರು ಮಳೆ: ಕೃತಕ ಪ್ರವಾಹ ಸೃಷ್ಟಿಯಾದ ಪ್ರದೇಶಗಳಿಗೆ ಬೈರತಿ ಬಸವರಾಜ್ ಭೇಟಿ

ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಈ ಪ್ರದೇಶಗಳಿಗೆ ಸಚಿವ ಬೈರತಿ ಬಸವರಾಜ್‌ ಬುಧವಾರ ಭೇಟಿ ನೀಡಿದರು.

Vijaya Karnataka Web 9 Sep 2020, 3:33 pm
ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದೆ. ನಗರದ ಹೊರಮಾವು ವಾರ್ಡ್‌ ಸೇರಿದಂತೆ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು ಜನರು ಪರದಾಟ ನಡೆಸುತ್ತಿದ್ದಾರೆ. ಮಳೆ ನೀರಿನಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಬೈರತಿ ಬಸವರಾಜ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web Bhyrathi basavaraj


ಹೊರಮಾವು ವಾರ್ಡ್‌ನ ಸಾಯಿಬಾಬಾ ಲೇಔಟ್ ನಲ್ಲಿ ಪರಿಶೀಲನೆ ನಡೆಸಿದ ಸಚಿವರು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ರಾಜುಕಾಲುವೆ ಒತ್ತುವರಿಯಿಂದ ಕೃತಕ ನೆರೆ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಆಗದಂತೆ ಒತ್ತುವಾರಿಯಾದ ಜಾಗ ನಿರ್ದಾಕ್ಷಿಣ ತೆರವುಗೊಳಿಸಿ ಸಮಸ್ಯೆಗೆ ಶಾಸ್ವತ ಪರಿಹಾರ ಕಲ್ಪಿಸುತ್ತೇನೆ ಎಂದು ಭರವಸೆ ನೀಡಿದರು.

ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆ, ಕೃತಕ ನೆರೆಯಿಂದ ಬೆಂಗಳೂರಿನ ಜನರ ಪರದಾಟ

ಸಿಎಂ ಬಿಎಸ್‌ ಯಡಿಯೂರಪ್ಪ ಸೂಚನೆಯಂತೆ ಮಳೆಯಿಂದ ಪ್ರವಾಹ ಸೃಷ್ಟಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರ ಬಳಿ ಸ್ಥಳೀಯರು ತಮ್ಮ ನೋವನ್ನು ಆಕ್ರೋಶದಿಂದ ತೋಡಿಕೊಂಡರು. ಸಮಸ್ಯೆಗೆ ಕೂಡಲೇ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.

ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ನಗರದ ಮೆಜೆಸ್ಟಿಕ್, ನಾಗರಬಾವಿ ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್ ಆರ್ ನಗರ ಸೇರಿದಂತೆ ಬಹುತೇಕ ಭಾಗಗಳಲ್ಲಿ ಸಾಕಷ್ಟು ಅವಾಂತರಗಳು ಉಂಟಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ