ಆ್ಯಪ್ನಗರ

ನ್ಯಾಯಾಲಯಕ್ಕೆ ಹಾಜರಾದ ಡಿ.ಕೆ. ಶಿವಕುಮಾರ್: ಜಾಮೀನು ಮಂಜೂರು

ತೆರಿಗೆ ವಂಚನೆ ಆರೋಪ ಪ್ರಕರಣ ಸಂಬಂಧ ವಿಚಾರಣೆಗಾಗಿ ಆರ್ಥಿಕ ಅಪರಾದಗಳ ನ್ಯಾಯಾಲಯಕ್ಕೆ ಸಚಿವ ಡಿ.ಕೆ ಶಿವಕುಮಾರ್ ಶನಿವಾರ ಹಾಜರಾಗಿದ್ದಾರೆ.

Vijaya Karnataka Web 15 Sep 2018, 3:55 pm
ಬೆಂಗಳೂರು: ತೆರಿಗೆ ವಂಚನೆ ಆರೋಪ ಪ್ರಕರಣ ಸಂಬಂಧ ವಿಚಾರಣೆಗಾಗಿ ಆರ್ಥಿಕ ಅಪರಾದಗಳ ನ್ಯಾಯಾಲಯಕ್ಕೆ ಸಚಿವ ಡಿ.ಕೆ ಶಿವಕುಮಾರ್ ಶನಿವಾರ ಹಾಜರಾಗಿದ್ದಾರೆ.
Vijaya Karnataka Web dk shivakumar


ಡಿ. ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಇಲಾಖೆ ಹಂತ ಹಂತವಾಗಿ ನಾಲ್ಕು ಕೇಸ್ ದಾಖಲಿಸಿತ್ತು.
ಈ ಪೈಕಿ 3 ಪ್ರಕರಣಗಳಲ್ಲಿ ಡಿಕೆಶಿ ಸಹಿತ ಉಳಿದ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ.

ನಾಲ್ಕನೇ ಪ್ರಕರಣದಲ್ಲಿ ನ್ಯಾಯಾಲಯವೂ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಶನಿವಾರ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಡಿಕೆಶಿ, ಸಚಿನ್ ನಾರಾಯಣ್ ಸಹಿತ ಇನ್ನಿತರ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಆರ್ಥಿಕ ಅಪರಾಧ ಪ್ರಕರಣಗಳ ನ್ಯಾಯಾಲಯ ನಾಲ್ಕನೇ ಪ್ರಕರಣದಲ್ಲೂ ಸಚಿವ ಡಿ. ಕೆ. ಶಿವಕುಮಾರ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ