ಆ್ಯಪ್ನಗರ

ಜಯನಗರ ಸರ್ಕಾರಿ ಆಸ್ಪತ್ರೆಗೆ ಸುಧಾಕರ್ ಭೇಟಿ, ಮಾಹಿತಿ ನೀಡದ ವೈದ್ಯಾಧಿಕಾರಿಗಳಿಗೆ ತರಾಟೆ

ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಸರಿಯಾಗಿ ಮಾಹಿತಿ ನೀಡದ ವೈದ್ಯಾಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.

Vijaya Karnataka Web 5 Jul 2020, 3:29 pm
ಬೆಂಗಳೂರು: ಕೋವಿಡ್‌-19 ಚಿಕಿತ್ಸೆ ನೀಡುತ್ತಿರುವ ಜಯನಗರದ ಖಾಸಗಿ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ರೋಗಿಗಳ ಜೊತೆಗೆ ಮಾತನಾಡಿದ ಸಚಿವರು ವೈದ್ಯಾಧಿಕಾರಿಗಳಿಗೂ ಸಲಹೆ ಸೂಚನೆಗಳನ್ನು ನೀಡಿದರು.
Vijaya Karnataka Web sudhakar visit


ಭಾನುವಾರ ಮಧ್ಯಾಹ್ಮ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಅಲ್ಲಿದ್ದ ರೋಗಿಗಳು ಹಾಗೂ ತಪಾಸಣೆ ಮಾಡಲು ಬಂದವರ ಬಳಿ ಮಾತುಕತೆ ನಡೆಸಿದರು. ಅಲ್ಲದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರೋಗಿಗಳ ಜೊತೆಗೆ ವಿಡಿಯೋ ಸಂವಾದ ನಡೆಸುವ ಮೂಲಕ ಆರೋಗ್ಯ ವಿಚಾರಿಸಿದರು.

ಲಾಕ್‌ಡೌನ್ ಮತ್ತೆ ಮಾಡಲ್ಲ, ಬೆಂಗಳೂರು ಬಿಟ್ಟು ತೆರಳಬೇಡಿ, ಜನರಲ್ಲಿ ಬಸವರಾಜ ಬೊಮ್ಮಾಯಿ ಮನವಿ

ಅಲ್ಲದೆ ಐಸಿಯು ಮತ್ತು ಸಾಮಾನ್ಯ ವಾರ್ಡುಗಳಲ್ಲಿರುವ ರೋಗಿಗಳ ಜತೆ ಮಾತುಕತೆ ನಡೆಸಿ ಮಾರ್ಗಸೂಚಿ ಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಯನ್ನು ನೀಡಿದರು.ಇದೇ ವೇಳೆ ವೈದ್ಯರಲ್ಲೂ ಮುಂದಿನ ದಿನಗಳಲ್ಲಿ ಮತ್ತಷ್ಟು ಕೆಲಸವನ್ನು ಮಾಡಬೇಕು ಎಂದು ವಿನಂತಿ ಮಾಡಿಕೊಂಡರು. ಅಲ್ಲದೆ ಚಿಕಿತ್ಸೆ ಹಾಗೂ ಇನ್ನಿತರ ಸೌಲಭ್ಯಗಳ ಕುರಿತಾಗಿ ಮಾಹಿತಿ ನೀಡದ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸರಕಾರಿ ಕಚೇರಿ ಖಾಲಿ ಖಾಲಿ: ಸಾರ್ವಜನಿಕರ ಪರದಾಟ.. ಸಿಬ್ಬಂದಿಗೂ ಹೆಚ್ಚಿನ ಹೊರೆ..

ಸಚಿವರ ಬಳಿ ಕೆಲವರು ಆಸ್ಪತ್ರೆಗೆ ಬಂದರೆ ಬೆಡ್‌ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಅಳಲನ್ನುತೋಡಿಕೊಂಡರು. ಸಮಸ್ಯೆಯನ್ನು ಸಾಧ್ಯವಾದಷ್ಟು ಸರಿಪಡಿಸಲಾಗುವುದು ಎಂದು ಸುಧಾಕರ್‌ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ