ಆ್ಯಪ್ನಗರ

ಕಾಮಗಾರಿ ಶೀಘ್ರ ಮುಕ್ತಾಯಕ್ಕೆ ಸಚಿವರ ಸೂಚನೆ

ಕೆಲ ವರ್ಷಗಳಿಂದ ತೆವಳುತ್ತಾ ಸಾಗಿರುವ ಕೊಡಿಗೇಹಳ್ಳಿ ರೈಲ್ವೆ ಕೆಳಸೇತುವೆ ನಿರ್ಮಾಣ ಕಾಮಗಾರಿಯನ್ನು ಸಚಿವ ಕೃಷ್ಣ ಬೈರೇಗೌಡ ಶನಿವಾರ ಪರಿಶೀಲನೆ ನಡೆಸಿದರು.

Vijaya Karnataka 10 Mar 2019, 5:00 am
ಬೆಂಗಳೂರು: ಕೆಲ ವರ್ಷಗಳಿಂದ ತೆವಳುತ್ತಾ ಸಾಗಿರುವ ಕೊಡಿಗೇಹಳ್ಳಿ ರೈಲ್ವೆ ಕೆಳಸೇತುವೆ ನಿರ್ಮಾಣ ಕಾಮಗಾರಿಯನ್ನು ಸಚಿವ ಕೃಷ್ಣ ಬೈರೇಗೌಡ ಶನಿವಾರ ಪರಿಶೀಲನೆ ನಡೆಸಿದರು.
Vijaya Karnataka Web minister ordered to finish underpass work very fast
ಕಾಮಗಾರಿ ಶೀಘ್ರ ಮುಕ್ತಾಯಕ್ಕೆ ಸಚಿವರ ಸೂಚನೆ


''ಕಾಮಗಾರಿ ವಿಳಂಬದಿಂದ ವಿದ್ಯಾರಣ್ಯಪುರ, ಕೊಡಿಗೇಹಳ್ಳಿ ಕಡೆಯಿಂದ ಬಳ್ಳಾರಿ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ವಾಹನ ಸಂಚಾರ ಬಹುತೇಕ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ, ವಾಹನ ಸಂಚಾರಕ್ಕೆ ಕೆಳಸೇತುವೆಯನ್ನು ಮುಕ್ತಗೊಳಿಸಬೇಕು,'' ಎಂದು ರೈಲ್ವೆ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ಬಿಬಿಎಂಪಿ ಮತ್ತು ರೈಲ್ವೆ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ 18.77 ಕೋಟಿ ರೂ. ವೆಚ್ಚದಲ್ಲಿ ಕೆಳಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಭೂಸ್ವಾಧೀನಕ್ಕೆ ಹೆಚ್ಚು ಹಣ ವೆಚ್ಚ ಮಾಡಿದ ಬಗ್ಗೆ ಜನರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕಾಮಗಾರಿ ಪೂರ್ಣಕ್ಕೆ ಹಲವು ಬಾರಿ ಗಡುವು ನೀಡಿದರೂ ಪ್ರಯೋಜನವಾಗಿಲ್ಲ. ಗುತ್ತಿಗೆದಾರರು ಒಂದಿಲ್ಲೊಂದು ನೆಪವೊಡ್ಡಿ, ಕಾಮಗಾರಿಯನ್ನು ನಿಧಾನಗೊಳಿಸಿದ್ದರು. ಈ ಕುರಿತು ರೈಲ್ವೆ ಇಲಾಖೆ ಸಹ ಮೇಲ್ವಿಚಾರಣೆ ನಡೆಸುತ್ತಿರಲಿಲ್ಲ. ಈ ಬಗ್ಗೆ ಸ್ಥಳೀಯರೊಬ್ಬರು ಪ್ರಧಾನಿ ಕಾರ್ಯಾಲಯಕ್ಕೆ ದೂರು ನೀಡಿದ ಬಳಿಕ ಎಚ್ಚೆತ್ತುಕೊಂಡು ರೈಲ್ವೆ ಇಲಾಖೆಯು ಬೇಗ ಕೆಲಸ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿತ್ತು.

ಅದಾಗ್ಯೂ, ಕಾಮಗಾಗಿ ಕುಂಠಿತಗೊಂಡಿದೆ. ಕಳೆದ ಜನವರಿಯಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಅವರು ಕಾಮಗಾರಿ ಪೂರ್ಣಗೊಳಿಸಲು ಒಂದು ತಿಂಗಳು ಗಡುವು ನೀಡಿದ್ದರು. ಗಡುವು ಮುಗಿದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಇನ್ನೂ ಸಾಕಷ್ಟು ಕೆಲಸಗಳು ಬಾಕಿ ಉಳಿದಿವೆ.

ಈ ಸೇತುವೆ ಕಾಮಗಾರಿ ಪೂರ್ಣಗೊಂಡರೆ ರೈಲು ಸಂಚಾರದ ವೇಳೆ ವಾಹನಗಳು ಸಾಲುಗಟ್ಟಿ ನಿಲ್ಲುವುದು ತಪ್ಪಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ