ಆ್ಯಪ್ನಗರ

ಪೇಜಾವರ ಶ್ರೀಗಳ ಸೌಹಾರ್ದದ ನಡೆ: ಸಚಿವ ರೋಶನ್ ಬೇಗ್‌ ಅಭಿನಂದನೆ

ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ರಂಜಾನ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ ಆಯೋಜಿಸಿದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ನಗರಾಭಿವೃದ್ಧಿ ಮತ್ತು ಹಜ್ ಸಚಿವ ರೋಶನ್ ಬೇಗ್‌ ಅಭಿನಂದಿಸಿದ್ದಾರೆ.

ವಿಕ ಸುದ್ದಿಲೋಕ 28 Jun 2017, 5:35 pm
ಬೆಂಗಳೂರು: ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ರಂಜಾನ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ ಆಯೋಜಿಸಿದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ನಗರಾಭಿವೃದ್ಧಿ ಮತ್ತು ಹಜ್ ಸಚಿವ ರೋಶನ್ ಬೇಗ್‌ ಅಭಿನಂದಿಸಿದ್ದಾರೆ.
Vijaya Karnataka Web minister roshan baig congratulate pejavar seer for organising iftar party
ಪೇಜಾವರ ಶ್ರೀಗಳ ಸೌಹಾರ್ದದ ನಡೆ: ಸಚಿವ ರೋಶನ್ ಬೇಗ್‌ ಅಭಿನಂದನೆ


ಸಣ್ಣಪುಟ್ಟ ಕಾರಣಗಳ ನೆಪದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಕೋಮುಶಕ್ತಿಗಳ ನಡುವೆ ಗೌರವಾನ್ವಿತ ಸ್ವಾಮೀಜಿಯವರು ತಮ್ಮ ಪರ್ಯಾಯದ ಅವಧಿಯಲ್ಲಿ ಮುಸ್ಲಿಂ ಬಾಂಧವರನ್ನು ಆಹ್ವಾನಿಸಿ ಸತ್ಕರಿಸಿರುವುದು ಎಲ್ಲರೂ ಹೆಮ್ಮೆ ಪಡುವ ವಿಷಯವಾಗಿದೆ. ಈ ಸತ್ಕಾರ್ಯವು ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಸಚಿವ ಬೇಗ್ ಹೇಳಿದ್ದಾರೆ.

ಶ್ರೀಗಳ ಮಾದರಿ ನಡೆಯು ಕರಾವಳಿ ಕರ್ನಾಟಕದ ಜನತೆಗೆ ಸೌಹಾರ್ದತೆಯ ಪಾಠವಾಗಿದೆ. ಗೌರವಾನ್ವಿತ ಪೇಜಾವರ ಶ್ರೀಗಳು ಮುಂದೆಯೂ ಇದೇ ಮಾರ್ಗವನ್ನು ಮುಂದುವರಿಸಿ ಕೋಮು ಸೌಹಾರ್ದ ಕಾಪಾಡುವಲ್ಲಿ ನೆರವಾಗುವರೆಂದು ಆಶಿಸುತ್ತೇನೆ ಎಂದು ಸಚಿವರು ಶ್ರೀಗಳಿಗೆ ಬರೆದ ಪತ್ರದಲ್ಲಿ ಹಾರೈಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ