ಆ್ಯಪ್ನಗರ

ಬೆಂಗಳೂರಿನಲ್ಲಿ ಇಬ್ಬರು‌ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ತಂದೆಯ ಬಗ್ಗೆ ಮಕ್ಕಳು ಸಹ ತೀವ್ರ ಬೇಸರಗೊಂಡಿದ್ದರು ಎಂದು ತಿಳಿದುಂದಿದ್ದು, ತಮ್ಮ ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲೂ ತಂದೆ ನಮ್ಮ ಜೀವನವನ್ನು ಹಾಳು ಮಾಡಿಬಿಟ್ಟರು ಎಂದು ಬರೆದುಕೊಂಡಿದ್ದರು ಎಂದು ವರದಿಯಾಗಿದೆ.

Vijaya Karnataka Web 12 Aug 2019, 12:29 pm
ಬೆಂಗಳೂರು: ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಶ್ರಿನಗರ ಬಸ್ ನಿಲ್ದಾಣದ ಬಳಿಯ ಮನೆಯಲ್ಲಿ ಈ ಘಟನೆ ನಡೆದಿದೆ.
Vijaya Karnataka Web 22222

ಪತಿ - ಪತ್ನಿ


ಬೆಂಗಳೂರಿನಲ್ಲಿ ಇಬ್ಬರು‌ ಹೆಣ್ಣುಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ಶ್ರಿನಗರ ಬಸ್ ನಿಲ್ದಾಣದ ಬಳಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.

ವಾಟ್ಸ್‌ಆ್ಯಪ್‌ ಸ್ಟೇಟಸ್‌


ಮೃತರನ್ನು ತಾಯಿ ರಾಜೇಶ್ವರಿ ( 43), ಮಕ್ಕಳಾದ ಮಾನಸ (17 ) ಹಾಗೂ ಭೂಮಿಕ (15) ಎಂದು ಗುರುತಿಸಲಾಗಿದೆ. ಈ ಸಂಬಂಧ ಸ್ಥಳಕ್ಕೆ ಹನುಮಂತನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಂಡ ಹಾಗೂ ಹೆಂಡತಿ ನಡುವೆ ಪದೇ ಪದೇ ಜಗಳ ನಡೆದಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ