ಆ್ಯಪ್ನಗರ

ಬೈರತಿ ಸುರೇಶ್‌ ಹತ್ಯೆಗೆ ಯತ್ನ, ಗಂಡಾಂತರದಿಂದ ಕೂದಲೆಳೆ ಅಂತರದಲ್ಲಿ ಪಾರು

ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್‌ ಶಾಸಕ, ಸಿದ್ದರಾಮಯ್ಯ ಆಪ್ತ ಬೈರತಿ ಸುರೇಶ್‌ ಹತ್ಯೆಗೆ ಯತ್ನ ನಡೆದಿದೆ. ಆದರೆ ಅವರು ಇದರಿಂದ ಪಾರಾಗಿದ್ದಾರೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Vijaya Karnataka 18 Oct 2019, 6:03 pm

ಬೆಂಗಳೂರು: ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬೈರತಿ ಸುರೇಶ್‌ ಹತ್ಯೆಗೆ ಯತ್ನ ನಡೆದಿದೆ. ಆದರೆ ಅವರು ಇದರಿಂದ ಪಾರಾಗಿದ್ದಾರೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
Vijaya Karnataka Web ByrathiSuresh


ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೂ ಆಗಿರುವ ಬೈರತಿ ಸುರೇಶ್‌ ಹತ್ಯೆಗೆ ಅವರ ಮನೆಯ ಬಳಿಯಲ್ಲೇ ಯತ್ನ ನಡೆದಿತ್ತು. ಇಬ್ಬರೂ ಗನ್‌ ಮ್ಯಾನ್‌ಗಳಿದ್ದರೂ ಭದ್ರತೆ ಭೇದಿಸಿದ ವ್ಯಕ್ತಿ ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ನಡೆದಿದೆ.

ರೌಡಿ ಶೀಟರ್ ಯಶಸ್ವಿನಿಯಿಂದ ಸನ್ಮಾನ ಸ್ವೀಕರಿಸಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ವೈರಲ್ ಆಯ್ತು ಫೋಟೋ

ಆದರೆ ಯಾವುದೇ ಗಾಯಗಳಿಲ್ಲದೆ ಶಾಸಕರು ಪಾರಾಗಿದ್ದಾರೆ. ಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವುದಾಗಿ ಈಶಾನ್ಯ ವಲಯ ಡಿಸಿಪಿ ಭೀಮಾಶಂಕರ್‌ ಗುಳೇದ್‌ ಮಾಹಿತಿ ನೀಡಿದ್ದಾರೆ.

ವೈರಲ್ ವಿಡಿಯೋ: ಅಪಘಾತದ ಗಾಯಾಳು ನರಳಾಟ ನೋಡಿಯೂ ನೆರವಾಗದ ಪೊಲೀಸ್ ಅಧಿಕಾರಿ!

ಹಲ್ಲೆ ಯತ್ನದ ವೇಳೆ ಬೈರತಿ ಸುರೇಶ್‌ ಅವರ ಕಾರಿಗೆ ಸಣ್ಣ ಪುಟ್ಟ ಹಾನಿಯಾಗಿದೆ. ಈ ಸಂಬಂಧ ಕೊತ್ತನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ