ಆ್ಯಪ್ನಗರ

ಮಠಗಳ ನಿಯಂತ್ರಣ: ಸಿಎಂ ನಿರ್ಧಾರಕ್ಕೆ ಸ್ವಾಮೀಜಿ ಮೆಚ್ಚುಗೆ

ಮಠ, ದೇವಸ್ಥಾನಗಳನ್ನು ನಿಯಂತ್ರಣ ಮಾಡುವ ಕೆಲಸಕ್ಕೆ ಸರಕಾರ ಕೈ ಹಾಕಬಾರದು‌. ಸರಕಾರ ಏನು ಮಾಡಬಹುದು ಎಂಬ ಗೊಂದಲ ಜನರಲ್ಲಿತ್ತು. ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲೇ ಉತ್ತರ ನೀಡಿ ಈ ಗೊಂದಲವನ್ನು ನಿವಾರಿಸಿದ್ದಾರೆ.

Vijaya Karnataka Web 9 Feb 2018, 12:14 pm
ಬೆಂಗಳೂರು: ಮಠ, ದೇವಸ್ಥಾನಗಳನ್ನು ನಿಯಂತ್ರಣ ಮಾಡುವ ಕೆಲಸಕ್ಕೆ ಸರಕಾರ ಕೈ ಹಾಕಬಾರದು‌. ಸರಕಾರ ಏನು ಮಾಡಬಹುದು ಎಂಬ ಗೊಂದಲ ಜನರಲ್ಲಿತ್ತು. ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲೇ ಉತ್ತರ ನೀಡಿ ಈ ಗೊಂದಲವನ್ನು ನಿವಾರಿಸಿದ್ದಾರೆ. ಇಂತಹ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
Vijaya Karnataka Web mutts and muzrai act
ಮಠಗಳ ನಿಯಂತ್ರಣ: ಸಿಎಂ ನಿರ್ಧಾರಕ್ಕೆ ಸ್ವಾಮೀಜಿ ಮೆಚ್ಚುಗೆ


ರಾಜಾಜಿನಗರದಲ್ಲಿ ಡಯಾಲಿಸಿಸ್ ಆಸ್ಪತ್ರೆಯ ಮಧುಮೇಹ ಕೇಂದ್ರವನ್ನು ಉದ್ಘಾಟಿಸಿದ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಧುಮೇಹ ಒಂದು ರೋಗವಲ್ಲ. ಆದರೆ ಅದು ಎಲ್ಲ ರೋಗಗಳಿಗೆ ತವರು ಮನೆ. ಅದೊಂದು ಕಾಯಿಲೆಯನ್ನು ನಿಯಂತ್ರಣ ದಲ್ಲಿ ಇಟ್ಟರೆ ಆರೋಗ್ಯ ಚೆನ್ನಾಗಿರುತ್ತದೆ‌. ಮನಸ್ಸನ್ನು ಆದಷ್ಟು ಶುದ್ಧವಾಗಿಟ್ಟುಕೊಂಡರೆ ಯಾವ ರೋಗವೂ ಬರುವುದಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ