ಆ್ಯಪ್ನಗರ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ನವೀನ್‌ಗೆ ಕಿಡ್ನಿ ವೈಫಲ್ಯ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ನವೀನ್​ಗೆ ಕಿಡ್ನಿ ಸಮಸ್ಯೆ ಆಗಿರುವ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಳೆದ 5 ದಿನಗಳಿಂದ ಪೊಲೀಸರ ಭದ್ರತೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.

Vijaya Karnataka 22 Jul 2021, 8:23 am
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ನವೀನ್‌ನನ್ನು ಕಿಡ್ನಿ ವೈಫಲ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Vijaya Karnataka Web gauri lankesh


2017ರ ಸೆಪ್ಟೆಂಬರ್‌ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು ದುಷ್ಕರ್ಮಿಗಳ ತಂಡ ಗುಂಡಿಟ್ಟು ಹತ್ಯೆ ಮಾಡಿತ್ತು. ಈ ಪ್ರಕರಣದ ಸಂಬಂಧ ನವೀನ್‌ನನ್ನು ಪೊಲೀಸರು ಬಂಧಿಸಿದ್ದರು. ಜೈಲಿನಲ್ಲಿದ್ದ ಆರೋಪಿ ನವೀನ್‌ ಅನಾರೋಗ್ಯದಿಂದ ಬಳಲುತ್ತಿದ್ದ.
ನಶೆಯಲ್ಲಿ ಮದ್ಯದ ಬಾಟಲಿ ಜೊತೆ ಅರೆನಗ್ನ ಫೋಟೋವನ್ನು ವಾಟ್ಸಾಪ್‌ ಗ್ರೂಪ್‌ಗೆ ಕಳಿಸಿದ ಪ್ರಾಂಶುಪಾಲ!
ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೊಳಪಡಿಸಿದಾಗ ಕಿಡ್ನಿ ವೈಫಲ್ಯವಾಗಿರುವುದು ತಿಳಿದು ಬಂದಿದೆ. ಕಳೆದ ಐದು ದಿನಗಳಿಂದಲೂ ನವೀನ್‌ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಯಲ್ಲಿ ನವೀನ್‌ ಚಿಕಿತ್ಸೆ ಪಡೆಯುತ್ತಿರುವ ವಾರ್ಡ್‌ ಬಳಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ