ಆ್ಯಪ್ನಗರ

ಬೆಂಗಳೂರು: ಕೊರೊನಾ ಕಾಟ, ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದರೆ, ಹೆಚ್ಚಿನ ಜನರು ಸೇರಲಿದ್ದಾರೆ ಎಂಬ ಕಾರಣಕ್ಕೆ ಪೂಜಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ, ವ್ಯಾಪಾರ-ವಹಿವಾಟಿಗೆ ನಿರ್ಬಂಧ ಇರುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸಬಹುದು

Vijaya Karnataka Web 1 Aug 2020, 11:43 am
ಬೆಂಗಳೂರು: ಕೊರೊನಾ ಸೋಂಕು ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಬೆಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


''ನಿಯಮ ಉಲ್ಲಂಘಿಘಿಸಿ, ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಸ್ಥಳಗಳಲ್ಲಿಪ್ರತಿಷ್ಠಾಪಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗುವುದು,'' ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಎಚ್ಚರಿಸಿದ್ದಾರೆ.

''ಕೆರೆ, ಕಲ್ಯಾಣಿ, ಟ್ಯಾಂಕ್‌ಗಳಲ್ಲೂ ಮೂರ್ತಿಗಳ ವಿಸರ್ಜನೆ ಮಾಡಲು ಅನುಮತಿ ನೀಡುವುದಿಲ್ಲ. ಸಾರ್ವಜನಿಕರು ಅತ್ಯಂತ ಸರಳವಾಗಿ ಹಬ್ಬಗಳನ್ನು ಆಚರಿಸಬೇಕು. ಪರಿಸರ ಸ್ನೇಹಿ ವಿಗ್ರಹಗಳನ್ನು ಮನೆಯಲ್ಲಿ ಪೂಜಿಸಿ, ವಿಸರ್ಜನೆ ಮಾಡಿಕೊಳ್ಳಬೇಕು. ಕೇಂದ್ರ ಸರಕಾರವು ಅನ್‌ಲಾಕ್‌ 03 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಅದರಂತೆ ಯಾವುದೇ ಹಬ್ಬ, ಸಮಾರಂಭ, ಗುಂಪು ಗೂಡುವ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿಲ್ಲವೆಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿರಾಜ್ಯ ಸರಕಾರದಿಂದಲೂ ಆದೇಶ ಹೊರಡಿಸಲಾಗಿದೆ'' ಎಂದರು.

''ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದರೆ, ಹೆಚ್ಚಿನ ಜನರು ಸೇರಲಿದ್ದಾರೆ ಎಂಬ ಕಾರಣಕ್ಕೆ ಪೂಜಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ, ವ್ಯಾಪಾರ-ವಹಿವಾಟಿಗೆ ನಿರ್ಬಂಧ ಇರುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸಬಹುದು'' ಎಂದು ತಿಳಿಸಿದರು.

ಸಾಮೂಹಿಕ ಪ್ರಾರ್ಥನೆಗಿಲ್ಲ ಅನುಮತಿ

''ಬಕ್ರೀದ್‌ ಹಬ್ಬದಂದು ಸಾಮೂಹಿಕ ಪ್ರಾರ್ಥನೆ ಮಾಡುವುದನ್ನು ವಕ್ಫ್ ಮಂಡಳಿಯೇ ನಿಷೇಧಿಸಿದೆ. ಅಲ್ಲದೇ ಮೇಕೆ, ಕುರಿ ಸೇರಿದಂತೆ ಇನ್ನಿತರೆ ಪ್ರಾಣಿಗಳ ವಧೆಯನ್ನು ಕೂಡ ನಿರ್ಬಂಧಿಸಲಾಗಿದೆ'' ಎಂದು ಆಯುಕ್ತ ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ