ಆ್ಯಪ್ನಗರ

ಬೆಂಗಳೂರಿನ ವಿಶ್ವೇಶ್ವರಯ್ಯ ಜಲ ನಿಗಮದ ಕಚೇರಿ ಸೀಲ್‌ಡೌನ್‌..!

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯೊಬ್ಬರಿಗೆ ಕೊರೊನಾ ಕಾಣಿಸಿಕೊಂಡು ಅಲ್ಲಿನ ಅಧಿಕಾರಿಗಳಿಗೆ ಆತಂಕ ಎದುರಾಗಿದೆ. ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಜಲ ನಿಗಮದ ನೋಂದಾಯಿತ ಕಚೇರಿಯ ಅಧಿಕಾರಿಯೊಬ್ಬರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ವಿಶ್ವೇಶ್ವರಯ್ಯ ಜಲ ನಿಗಮದ ಕಚೇರಿಯನ್ನೇ ಸೀಲ್‌ಡೌನ್‌ ಮಾಡಲಾಗಿದೆ.

Vijaya Karnataka Web 27 Jul 2020, 6:42 pm
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಏರುತ್ತಲೇ ಇದೆ. ಇತ್ತ ಸರ್ಕಾರ ಕೂಡ ಕೊರೊನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದು ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಬಹುತೇಕ ಪ್ರದೇಶಗಳಲ್ಲಿ ಸೀಲ್‌ಡೌನ್‌ ಮಾಡಲಾಗ್ತಿದೆ.
Vijaya Karnataka Web COVID


ಶೇಷಾದ್ರಿಪುರಂನ ಪ್ರತಿಷ್ಠಿತ ಬೇಕರಿಯ ಮಾಲೀಕ ಕೊರೊನಾಗೆ ಬಲಿ, ಗ್ರಾಹಕರಲ್ಲಿ ಭಯದ ಕರಿ ಛಾಯೆ!

ಈ ಮಧ್ಯೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯೊಬ್ಬರಿಗೆ ಕೊರೊನಾ ಕಾಣಿಸಿಕೊಂಡು ಅಲ್ಲಿನ ಅಧಿಕಾರಿಗಳಿಗೆ ಆತಂಕ ಎದುರಾಗಿದೆ. ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಜಲ ನಿಗಮದ ನೋಂದಾಯಿತ ಕಚೇರಿಯ ಅಧಿಕಾರಿಯೊಬ್ಬರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ವಿಶ್ವೇಶ್ವರಯ್ಯ ಜಲ ನಿಗಮದ ಕಚೇರಿಯನ್ನೇ ಸೀಲ್‌ಡೌನ್‌ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಸೋಂಕಿತರ ಸಂಖ್ಯೆ 45,453ಕ್ಕೆ ಏರಿಕೆ

ಅಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಇಟವ್ ಕಾಣಿಸಿಕೊಂಡ ಹಿನ್ನೆಲೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಚೇರಿಯನ್ನ ಇಂದಿನಿಂದಲೇ ಸೀಲ್‌ಡೌನ್‌ ಮಾಡಿ ಆದೆಶ ಹೊರಡಿಸಲಾಗಿದ್ದು, ಮುಂದಿನ ಮೂರು ದಿನಗಳ ಕಾಲ ಕಚೇರಿ ಸಂಪೂರ್ಣ ಮುಚ್ಚಿರುತ್ತದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನ ಲಾಲ್‌ಬಾಗ್‌ ಉದ್ಯಾನದಲ್ಲಿ ವಾಯುವಿಹಾರಕ್ಕೆ ಮಾತ್ರ ಅವಕಾಶ

ಸದ್ಯ ಕೊರೊನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಶ್ವೇಶ್ವರಯ್ಯ ಜಲ ನಿಗಮದ ಕಚೇರಿಯನ್ನು ಮುಚ್ಚಲಾಗಿದ್ದು, ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿ ಯಾರೂ ಆ ಕಡೆ ಹೋಗದಂತೆ ತಡೆ ಹಿಡಿಯಲಾಗ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ