ಕತ್ತರಿಗುಪ್ಪೆ ಬಳಿ ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ವ್ಯಕ್ತಿ ದುರ್ಮರಣ!

Vijaya Karnataka Web 20 May 2022, 7:48 pm
ಭಾರೀ ಮಳೆಯಿಂದ ತತ್ತರಿಸಿದ್ದ ಬೆಂಗಳೂರಿನ ಜನತೆ ಇದೀಗ ಕತ್ತರಿಗುಪ್ಪೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಕಂಡು ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಜನನಿಬಿಡ ಕತ್ತರಿಗುಪ್ಪೆ ಬಳಿ ಉದ್ಭವ ಆಸ್ಪತ್ರೆ ಎದುರೇ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕತ್ತರಿಗುಪ್ಪೆ ಸಮೀಪ ಕಾಫಿ ಕುಡಿದು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ನಾಲ್ವರ ಮೇಲೆ, ಅತಿ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿಗಳು ತರಗೆಲೆಗಳಂತೆ ಮೇಲೆ ಹಾರಿ ಬಿದ್ದಿದ್ದಾರೆ. ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಕ್ಯಾಟರಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೆಲಸ ಮುಗಿಸಿಕೊಂಡು ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದರು.

ಬೆಂಗಳೂರು: ಪಾದಚಾರಿಗಳಿಗೆ ಗುದ್ದಿದ ಕಾರು, ಗಾಳಿಯಲ್ಲಿ ಎಗರಿ ದೂರ ಬಿದ್ದ ನಾಲ್ವರು, ಓರ್ವ ಸಾವು

ಮತ್ತೊಬ್ಬ ವಿದ್ಯಾರ್ಥಿ ಇವರ ಪಕ್ಕದಲ್ಲೇ ನಡೆದುಕೊಂಡು ಬರುತ್ತಿದ್ದ. ಈ ಸಂದರ್ಭದಲ್ಲಿ ಎದುರಿನಿಂದ ವೇಗವಾಗಿ ಬಂದು ಕಾರು ಈ ನಾಲ್ವರಿಗೆ ಜೋರಾಗಿ ಡಿಕ್ಕಿ ಹೊಡೆದಿದೆ. ನಂತರ ಈ ಕಾರು ಮತ್ತೊಂದು ಕಾರಿಗೆ ಗುದ್ದಿ ನಿಂತಿದೆ. ಕಾರು ಚಾಲಕ ಮುಖೇಶ್‌ ಅಜಾಗರೂಕತೆಯಿಂದ ವೇಗವಾಗಿ ಓಡಿಸಿಕೊಂಡು ಬರುತ್ತಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
Loading ...