ಬೆಂಗಳೂರು ವಿವಿಯಲ್ಲಿ ಬುದ್ಧ ಇಲ್ಲ, ಸರಸ್ವತಿ ಪ್ರತಿಮೆಗೆ ಮಾತ್ರ ಅವಕಾಶ,
ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಸೋಮವಾರ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ವಿಶ್ರಾಂತ ಕುಲಪತಿಗಳು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
Vijaya Karnataka 4 Jun 2019, 10:29 am
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿನ ಆಡಳಿತ ಕಚೇರಿ ಪ್ರವೇಶ ದ್ವಾರದಲ್ಲಿ ಸರಸ್ವತಿ ಪ್ರತಿಮೆಯನ್ನು ಮಾತ್ರ ಪ್ರತಿಷ್ಠಾಪಿಸಲು ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ಪ್ರತಿಮಾ ವಿವಾದಕ್ಕೆ ತೆರೆ ಎಳೆದಿದೆ.
ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಸೋಮವಾರ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ವಿಶ್ರಾಂತ ಕುಲಪತಿಗಳು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
''ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿನ ಆಡಳಿತ ಕಚೇರಿಯ ಪ್ರವೇಶ ದ್ವಾರದಲ್ಲಿ ಮೂಲ ಜಾಗದಲ್ಲಿ ಸರಸ್ವತಿ ಪ್ರತಿಮೆಯನ್ನು ಮಾತ್ರ ಪ್ರತಿಷ್ಠಾಪಿಸಲಾಗುವುದು. ಉಳಿದಂತೆ ಬೇರೆ ಯಾವುದೇ ಗಣ್ಯರು ಅಥವಾ ದೇವರ ವಿಗ್ರಹಗಳ ಪ್ರತಿಮೆ ಸ್ಥಾಪಿಸುವುದಕ್ಕೆ ಅವಕಾಶ ನೀಡದಂತೆ ಇಲಾಖೆಗೆ ಸೂಚನೆ ನೀಡಲಾಗಿದೆ'' ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಸುದ್ದಿಗಾರರಿಗೆ ತಿಳಿಸಿದರು.
ಪ್ರತಿಮೆ ವಿವಾದದ ಹಿನ್ನೆಲೆ:
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿನ ಆಡಳಿತ ಕಚೇರಿಯ ಪ್ರವೇಶ ದ್ವಾರದಲ್ಲಿ ಭಗ್ನಗೊಂಡಿದ್ದ ಸರಸ್ವತಿ ವಿಗ್ರಹವನ್ನು ತೆಗೆದು ಹೊಸ ವಿಗ್ರಹ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಭಗ್ನಗೊಂಡಿದ್ದ ಪ್ರತಿಮೆಯನ್ನು ತೆರವುಗೊಳಿಸಲಾಗಿತ್ತು. ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಅವರೇ ತಮ್ಮ ಸ್ವಂತ ಖರ್ಚಿನಿಂದ ಹೊಸ ಪ್ರತಿಮೆ ಸಿದ್ಧಪಡಿಸಿ ಪ್ರತಿಷ್ಠಾಪನೆಗೆ ದಿನಾಂಕ ನಿಗದಿಪಡಿಸಿದ್ದರು. ಅಷ್ಟರಲ್ಲಿಯೇ ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಸದಸ್ಯರು ಇಬ್ಬರು ಪ್ರಾಧ್ಯಾಪಕರ ಸಮ್ಮುಖದಲ್ಲಿ ಸರಸ್ವತಿ ಪ್ರತಿಮೆ ಜಾಗದಲ್ಲಿ ಬುದ್ಧನ ಪ್ರತಿಮೆ ಪ್ರತಿಷ್ಠಾಪಿಸಿದ್ದರು. ಇದರಿಂದ ವಿವಿಯಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು.
ಈ ಹಿನ್ನೆಲೆಯಲ್ಲಿ ಸಿಂಡಿಕೇಟ್ನ ಉಪ ಸಮಿತಿ ಸಭೆ ಸೇರಿ ಸರಸ್ವತಿ ಪ್ರತಿಮೆಯನ್ನು ಮೂಲ ಜಾಗದಲ್ಲೇ ಪ್ರತಿಷ್ಠಾಪಿಸಿ ಅದರ ಪಕ್ಕ ಬುದ್ಧನ ಪ್ರತಿಮೆ ಪ್ರತಿಷ್ಠಾಪಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಇತ್ತೀಚೆಗೆ ನಡೆದ ಸಿಂಡಿಕೇಟ್ ಸಭೆಯಲ್ಲಿ ಪ್ರತಿಮೆ ವಿವಾದ ಸಂಬಂಧ ಸರಕಾರಕ್ಕೆ ವರದಿ ಸಲ್ಲಿಸಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿತ್ತು.
ಈ ನಡುವೆ, ಸರಸ್ವತಿ ಪ್ರತಿಮೆ ಪಕ್ಕದಲ್ಲೇ ದಾಸ ಶ್ರೇಷ್ಠ ಕನಕದಾಸ, ಕ್ರಾಂತಿಯೋಗಿ ಬಸವಣ್ಣ, ತತ್ವಜ್ಞಾನಿ ಸಂತ ಶಿಶುನಾಳ ಷರೀಫ, ನಾಡಪ್ರಭು ಕೆಂಪೇಗೌಡ ಹಾಗೂ ರಾಷ್ಟ್ರಪಿತ ಮಹಾತ್ಮಗಾಂಧಿಧೀಜಿಯವರ ತಲಾ ಮೂರು ಅಡಿಗಳ ಪ್ರತಿಮೆಯನ್ನು ಸ್ಥಾಪಿಸುವಂತೆ ಕೋರಿ 'ಅಹಿಂಸಾ' ನೌಕರರ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. 150 ಮಂದಿ ನೌಕರರು ಪತ್ರಕ್ಕೂ ಸಹಿ ಹಾಕಿದ್ದರು. ಇದರಿಂದ ವಿವಿಯಲ್ಲಿ ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಡುವ ವಾತಾವರಣ ಸೃಷ್ಟಿಯಾಗಿತ್ತು.
''ಸರಸ್ವತಿ ಪ್ರತಿಮೆ ಬಳಿ ಬುದ್ಧನ ಪ್ರತಿಮೆ ಸ್ಥಾಪಿಸುವುದಾದಲ್ಲಿ ಈ ಐವರ ಪ್ರತಿಮೆಗಳನ್ನೂ ಅಲ್ಲೇ ಸ್ಥಾಪಿಸಬೇಕು. ಇದ್ದರೆ ಮೊದಲಿನಂತೆ ಸರಸ್ವತಿ ಪ್ರತಿಮೆಯೊಂದೇ ಇರಲಿ'' ಎಂದು ಸಹಿ ಸಂಗ್ರಹ ಅಭಿಯಾನದ ನೇತೃತ್ವ ವಹಿಸಿದ್ದ ನೌಕರರು ಆಗ್ರಹಿಸಿದ್ದರು.
ಆನಂತರ, ಕರ್ನಾಟಕ ರಾಜ್ಯ ರೈತ ಸಂಘ ಕೂಡ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಿ, ರೈತ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಪ್ರತಿಮೆಯನ್ನು ಸ್ಥಾಪಿಸಲು ಆಗ್ರಹಿಸಿತ್ತು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೂಲ ಜಾಗದಲ್ಲಿ ಸರಸ್ವತಿ ವಿಗ್ರಹವನ್ನು ಮಾತ್ರ ಸ್ಥಾಪಿಸಲು ಸರಕಾರ ಅವಕಾಶ ನೀಡಿದೆ.
ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಸೋಮವಾರ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ವಿಶ್ರಾಂತ ಕುಲಪತಿಗಳು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
''ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿನ ಆಡಳಿತ ಕಚೇರಿಯ ಪ್ರವೇಶ ದ್ವಾರದಲ್ಲಿ ಮೂಲ ಜಾಗದಲ್ಲಿ ಸರಸ್ವತಿ ಪ್ರತಿಮೆಯನ್ನು ಮಾತ್ರ ಪ್ರತಿಷ್ಠಾಪಿಸಲಾಗುವುದು. ಉಳಿದಂತೆ ಬೇರೆ ಯಾವುದೇ ಗಣ್ಯರು ಅಥವಾ ದೇವರ ವಿಗ್ರಹಗಳ ಪ್ರತಿಮೆ ಸ್ಥಾಪಿಸುವುದಕ್ಕೆ ಅವಕಾಶ ನೀಡದಂತೆ ಇಲಾಖೆಗೆ ಸೂಚನೆ ನೀಡಲಾಗಿದೆ'' ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಸುದ್ದಿಗಾರರಿಗೆ ತಿಳಿಸಿದರು.
ಪ್ರತಿಮೆ ವಿವಾದದ ಹಿನ್ನೆಲೆ:
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿನ ಆಡಳಿತ ಕಚೇರಿಯ ಪ್ರವೇಶ ದ್ವಾರದಲ್ಲಿ ಭಗ್ನಗೊಂಡಿದ್ದ ಸರಸ್ವತಿ ವಿಗ್ರಹವನ್ನು ತೆಗೆದು ಹೊಸ ವಿಗ್ರಹ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಭಗ್ನಗೊಂಡಿದ್ದ ಪ್ರತಿಮೆಯನ್ನು ತೆರವುಗೊಳಿಸಲಾಗಿತ್ತು. ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಅವರೇ ತಮ್ಮ ಸ್ವಂತ ಖರ್ಚಿನಿಂದ ಹೊಸ ಪ್ರತಿಮೆ ಸಿದ್ಧಪಡಿಸಿ ಪ್ರತಿಷ್ಠಾಪನೆಗೆ ದಿನಾಂಕ ನಿಗದಿಪಡಿಸಿದ್ದರು. ಅಷ್ಟರಲ್ಲಿಯೇ ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಸದಸ್ಯರು ಇಬ್ಬರು ಪ್ರಾಧ್ಯಾಪಕರ ಸಮ್ಮುಖದಲ್ಲಿ ಸರಸ್ವತಿ ಪ್ರತಿಮೆ ಜಾಗದಲ್ಲಿ ಬುದ್ಧನ ಪ್ರತಿಮೆ ಪ್ರತಿಷ್ಠಾಪಿಸಿದ್ದರು. ಇದರಿಂದ ವಿವಿಯಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು.
ಈ ಹಿನ್ನೆಲೆಯಲ್ಲಿ ಸಿಂಡಿಕೇಟ್ನ ಉಪ ಸಮಿತಿ ಸಭೆ ಸೇರಿ ಸರಸ್ವತಿ ಪ್ರತಿಮೆಯನ್ನು ಮೂಲ ಜಾಗದಲ್ಲೇ ಪ್ರತಿಷ್ಠಾಪಿಸಿ ಅದರ ಪಕ್ಕ ಬುದ್ಧನ ಪ್ರತಿಮೆ ಪ್ರತಿಷ್ಠಾಪಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಇತ್ತೀಚೆಗೆ ನಡೆದ ಸಿಂಡಿಕೇಟ್ ಸಭೆಯಲ್ಲಿ ಪ್ರತಿಮೆ ವಿವಾದ ಸಂಬಂಧ ಸರಕಾರಕ್ಕೆ ವರದಿ ಸಲ್ಲಿಸಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿತ್ತು.
ಈ ನಡುವೆ, ಸರಸ್ವತಿ ಪ್ರತಿಮೆ ಪಕ್ಕದಲ್ಲೇ ದಾಸ ಶ್ರೇಷ್ಠ ಕನಕದಾಸ, ಕ್ರಾಂತಿಯೋಗಿ ಬಸವಣ್ಣ, ತತ್ವಜ್ಞಾನಿ ಸಂತ ಶಿಶುನಾಳ ಷರೀಫ, ನಾಡಪ್ರಭು ಕೆಂಪೇಗೌಡ ಹಾಗೂ ರಾಷ್ಟ್ರಪಿತ ಮಹಾತ್ಮಗಾಂಧಿಧೀಜಿಯವರ ತಲಾ ಮೂರು ಅಡಿಗಳ ಪ್ರತಿಮೆಯನ್ನು ಸ್ಥಾಪಿಸುವಂತೆ ಕೋರಿ 'ಅಹಿಂಸಾ' ನೌಕರರ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. 150 ಮಂದಿ ನೌಕರರು ಪತ್ರಕ್ಕೂ ಸಹಿ ಹಾಕಿದ್ದರು. ಇದರಿಂದ ವಿವಿಯಲ್ಲಿ ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಡುವ ವಾತಾವರಣ ಸೃಷ್ಟಿಯಾಗಿತ್ತು.
''ಸರಸ್ವತಿ ಪ್ರತಿಮೆ ಬಳಿ ಬುದ್ಧನ ಪ್ರತಿಮೆ ಸ್ಥಾಪಿಸುವುದಾದಲ್ಲಿ ಈ ಐವರ ಪ್ರತಿಮೆಗಳನ್ನೂ ಅಲ್ಲೇ ಸ್ಥಾಪಿಸಬೇಕು. ಇದ್ದರೆ ಮೊದಲಿನಂತೆ ಸರಸ್ವತಿ ಪ್ರತಿಮೆಯೊಂದೇ ಇರಲಿ'' ಎಂದು ಸಹಿ ಸಂಗ್ರಹ ಅಭಿಯಾನದ ನೇತೃತ್ವ ವಹಿಸಿದ್ದ ನೌಕರರು ಆಗ್ರಹಿಸಿದ್ದರು.
ಆನಂತರ, ಕರ್ನಾಟಕ ರಾಜ್ಯ ರೈತ ಸಂಘ ಕೂಡ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಿ, ರೈತ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಪ್ರತಿಮೆಯನ್ನು ಸ್ಥಾಪಿಸಲು ಆಗ್ರಹಿಸಿತ್ತು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೂಲ ಜಾಗದಲ್ಲಿ ಸರಸ್ವತಿ ವಿಗ್ರಹವನ್ನು ಮಾತ್ರ ಸ್ಥಾಪಿಸಲು ಸರಕಾರ ಅವಕಾಶ ನೀಡಿದೆ.