ಆಪ್ತರು ಯಾರು? ಡಿಕೆಶಿ ಹೆಸರು ಪ್ರಸ್ತಾಪಿಸದೆ ಮೌನಿಯಾದ ವಿಪಕ್ಷ ನಾಯಕ ಸಿದ್ದರಾಮಯ್ಯ..!
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಲ್ಲವೇ..? ಎಂಬ ಪ್ರಶ್ನೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡದೆ ಮೌನವಾಗಿ ತೆರಳಿದ ಪ್ರಸಂಗ ನಡೆಯಿತು. ಪಿಎಸ್ಐ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಬಂಧನದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಮೀರ್ ಅಹ್ಮದ್ ಆಪ್ತರಲ್ಲವಾ ಎಂಬ ಪ್ರಶ್ನೆಗೆ, ತನಗೆ ಜಮೀರ್ ಮಾತ್ರ ಅಲ್ಲ, ಎಲ್ಲರೂ ಆಪ್ತರೇ ಆಗಿದ್ದಾರೆ ಎಂದರು.
ಹೈಲೈಟ್ಸ್:
- ತನಗೆ ಜಮೀರ್ ಮಾತ್ರವಲ್ಲ ಎಲ್ಲರೂ ಆಪ್ತರೇ ಎಂದ ವಿಪಕ್ಷ ನಾಯಕ
- ಡಿಕೆಶಿ ಆಪ್ತರಲ್ಲವೇ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಮೌನ..!
- ಚರ್ಚೆಗೆ ಎಡೆಮಾಡಿಕೊಟ್ಟ ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ..!
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಲ್ಲವೇ..? ಎಂಬ ಪ್ರಶ್ನೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡದೆ ಮೌನವಾಗಿ ತೆರಳಿದ ಪ್ರಸಂಗ ನಡೆಯಿತು. ಪಿಎಸ್ಐ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಬಂಧನದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ ಹಾಗೂ ಕಚೇರಿಯ ಮೇಲೆ ಎಸಿಬಿ ದಾಳಿ ವಿಚಾರವಾಗಿ ಕೇಳಿದ ಪ್ರಶ್ನೆಯ ಸಂದರ್ಭದಲ್ಲಿ ಜಮೀರ್ ನಿಮಗೆ ಆಪ್ತರಲ್ಲವೇ? ಎಂದಿದ್ದಕ್ಕೆ ನನಗೆ ಜಮೀರ್ ಮಾತ್ರ ಅಲ್ಲ, ಎಲ್ಲರೂ ಆಪ್ತರೇ ಆಗಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಕದಲ್ಲಿ ಕುಳಿತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಹೆಸರನ್ನು ಉಲ್ಲೇಖಿಸಿ ಅವರು ಕೂಡಾ ಆಪ್ತರೇ ಆಗಿದ್ದಾರೆ ಎಂದರು.
ಹಾಗಾದರೆ ನಿಮ್ಮ ಪಕ್ಕದಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ ಆಪ್ತರಲ್ಲವೇ? ಎಂದು ಪದೇ ಪದೇ ಪತ್ರಕರ್ತರು ಕೇಳಿದರೂ ಸಿದ್ದರಾಮಯ್ಯ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಪ್ರಶ್ನೆ ಕೇಳಿದ ಪತ್ರಕರ್ತರನ್ನು ಉದ್ದೇಶಿಸಿ ನೀವೂ ಆಪ್ತರೇ ಎಂದು ಸುಮ್ಮನಾದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯ ಸಹಜವಾಗಿ ಚರ್ಚೆಗೆ ಗ್ರಾಸವಾಗುತ್ತಿದೆ. ಸಿಎಂ ಸ್ಥಾನದ ಮೇಲೆ ಇಬ್ಬರೂ ಕಣ್ಣಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಹಲವು ಆಂತರಿಕ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ಸಿದ್ದರಾಮೋತ್ಸವ ಕಾರ್ಯಕ್ರಮದ ಬಗ್ಗೆಯೂ ಪಕ್ಷದಲ್ಲಿ ಅಪಸ್ವರ ಕೇಳಿಬರುತ್ತಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಡೆದ ಪ್ರಸಂಗ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಈ ವೇಳೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ ಹಾಗೂ ಕಚೇರಿಯ ಮೇಲೆ ಎಸಿಬಿ ದಾಳಿ ವಿಚಾರವಾಗಿ ಕೇಳಿದ ಪ್ರಶ್ನೆಯ ಸಂದರ್ಭದಲ್ಲಿ ಜಮೀರ್ ನಿಮಗೆ ಆಪ್ತರಲ್ಲವೇ? ಎಂದಿದ್ದಕ್ಕೆ ನನಗೆ ಜಮೀರ್ ಮಾತ್ರ ಅಲ್ಲ, ಎಲ್ಲರೂ ಆಪ್ತರೇ ಆಗಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಕದಲ್ಲಿ ಕುಳಿತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಹೆಸರನ್ನು ಉಲ್ಲೇಖಿಸಿ ಅವರು ಕೂಡಾ ಆಪ್ತರೇ ಆಗಿದ್ದಾರೆ ಎಂದರು.
ಹಾಗಾದರೆ ನಿಮ್ಮ ಪಕ್ಕದಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ ಆಪ್ತರಲ್ಲವೇ? ಎಂದು ಪದೇ ಪದೇ ಪತ್ರಕರ್ತರು ಕೇಳಿದರೂ ಸಿದ್ದರಾಮಯ್ಯ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಪ್ರಶ್ನೆ ಕೇಳಿದ ಪತ್ರಕರ್ತರನ್ನು ಉದ್ದೇಶಿಸಿ ನೀವೂ ಆಪ್ತರೇ ಎಂದು ಸುಮ್ಮನಾದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯ ಸಹಜವಾಗಿ ಚರ್ಚೆಗೆ ಗ್ರಾಸವಾಗುತ್ತಿದೆ. ಸಿಎಂ ಸ್ಥಾನದ ಮೇಲೆ ಇಬ್ಬರೂ ಕಣ್ಣಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಹಲವು ಆಂತರಿಕ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ಸಿದ್ದರಾಮೋತ್ಸವ ಕಾರ್ಯಕ್ರಮದ ಬಗ್ಗೆಯೂ ಪಕ್ಷದಲ್ಲಿ ಅಪಸ್ವರ ಕೇಳಿಬರುತ್ತಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಡೆದ ಪ್ರಸಂಗ ಚರ್ಚೆಗೆ ಎಡೆಮಾಡಿಕೊಟ್ಟಿದೆ.