ಆ್ಯಪ್ನಗರ

ಪಾದರಾಯನಪುರ ಗಲಭೆ: ತಲೆಮರೆಸಿಕೊಂಡಿದ್ದಾನೆ ಪ್ರಕರಣದ ಪ್ರಮುಖ ಆರೋಪಿ

ಪಾದರಾಯನಪುರ ಗಲಭೆಗೆ ಸಂಬಂಧಿಸಿದಂತೆ ಪ್ರಕರಣ ಪ್ರಮುಖ ಆರೋಪಿ ಇರ್ಫಾನ್ ಆಲಿಯಾಸ್ ಕೆಎಫ್‌ಡಿ ಇರ್ಫಾನ್ ತಲೆಮರೆಸಿಕೊಂಡಿದ್ದಾನೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈತನ ಬಂಧನವಾದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳ ಪೊಲೀಸರಿಗೆ ಲಭ್ಯವಾಗಲಿದೆ.

Vijaya Karnataka Web 24 Apr 2020, 11:31 am
ಬೆಂಗಳೂರು: ಪಾದರಾಯನಪುರದಲ್ಲಿ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದಾಂಧಲೆ ನಡೆದ್ದ ಘಟನೆಗೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಕೆಎಫ್‌ಡಿ ಇರ್ಫಾನ್ ಇನ್ನೂ ತಲೆಮರೆಸಿಕೊಂಡಿದ್ದಾರೆ. ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಸೆರೆ ಸಿಕ್ಕರೆ ಘಟನೆಯ ಕುರಿತಾಗಿ ಮತ್ತಷ್ಟು ಮಾಹಿತಿ ಬಹಿರಂಗವಾಗಲಿದೆ.
Vijaya Karnataka Web padaramanapura


ಭಾನುವಾರ ರಾತ್ರಿ ಕೊರೊನಾ ಸೋಂಕು ಶಂಕಿತರನ್ನು ಕ್ವಾರಂಟೈನ್‌ ಮಾಡಲು ತೆರಳಿದ್ದ ವೈದ್ಯಕೀಯ ಸಿಬ್ಬಂದಿ ಮೇಲೆ ಕಿಡಿಗೇಡಿಗಳ ತಂಡ ದಾಂಧಲೆ ನಡೆಸಿತ್ತು. ಬಳಿಕ ಪೊಲೀಸ್ ಕ್ಯಾಂಪ್‌ ಮೇಲೂ ದಾಳಿ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಲೇ ಸುಮಾರು 126 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಪಾದರಾಯನಪುರ ಆರೋಪಿಗಳಿಗೆ ಕೊರೊನಾ, ರಾಮನಗರ ಜೈಲಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್

ಗಲಭೆಯ ಹಿಂದೆ ಕೆಎಫ್‌ಡಿ ಇರ್ಫಾನ್‌ ಪ್ರಮುಖ ಕೈವಾಡವಿದ್ದು ಈತನ ಬಂಧನವಾದರೆ ಪೊಲೀಸರಿಗೆ ಮತ್ತಷ್ಟು ಮಾಹಿತಿ ಸಿಗಲಿದೆ. ಇರ್ಫಾನ್‌ ಸ್ಥಳೀಯವಾಗಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ. ಸಂಘಟನೆಯೊಂದರಲ್ಲೂ ಸಕ್ರಿಯವಾಗಿದ್ದ. ಈ ಕಾರಣಕ್ಕಾಗಿಯೇ ಕೆಎಫ್‌ಡಿ ಇರ್ಫಾನ್ ಎಂದು ಸ್ಥಳೀಯವಾಗಿ ಗುರುತಿಸಿಕೊಂಡಿದ್ದ ಎಂಬ ಮಾಹಿತಿ ಇದೆ.

ಕೊರೊನಾ ಲೈವ್ ಅಪ್ಡೇಟ್ಸ್: ದೇಶದಲ್ಲಿ 23 ಸಾವಿರ ದಾಟಿದ ಸೋಂಕಿತರು!

ಪ್ರಕರಣದ ಕುರಿತಾಗಿ ತನಿಖೆ ನಡೆದಲು ಪೊಲೀಸರು 18 ತಂಡಗಳನ್ನು ರಚನೆ ಮಾಡಿದ್ದಾರೆ. ಸದ್ಯ ಪಾದರಾಯನಪುರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಮುಂಜಾಗರೂಕತಾ ಕ್ರಮವಾಗಿ 800 ಕ್ಕೂಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ