ಆ್ಯಪ್ನಗರ

ಹೈದರಾಬಾದ್ ನೆನಪಿಸಿದ ಬೆಂಗಳೂರು ಮಳೆ: ಸತತ ಮೂರು ಗಂಟೆಯಿಂದ ಭೋರ್ಗರೆಯುತ್ತಿರುವ ವರುಣ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಸತತ ಮೂರು ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಹೈದರಾಬಾದ್ ಸ್ಥಿತಿ ಬಂದೊದಗಿದರೆ ಏನು ಗತಿ ಎಂಬ ಆತಂಕದಲ್ಲಿದ್ದಾರೆ.

Vijaya Karnataka Web 20 Oct 2020, 10:22 pm
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಸತತ ಮೂರು ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಹೈದರಾಬಾದ್ ಸ್ಥಿತಿ ಬಂದೊದಗಿದರೆ ಏನು ಗತಿ ಎಂಬ ಆತಂಕದಲ್ಲಿದ್ದಾರೆ.
Vijaya Karnataka Web rain
ಸಂಗ್ರಹ ಚಿತ್ರ


ನಗರದ ಬಹುತೇಕ ಕಡೆ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಪ್ರಮುಖ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜಧಾನಿಯೂ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದ ಮೆಜೆಸ್ಟಿಕ್, ಕೆಆರ್‌ ಮಾರ್ಕೆಟ್, ಮಲ್ಲೇಶ್ವರ, ಶಾಂತಿನಗರ, ಜಯನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತಿದೆ.

ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ: ರಾಜ್ಯದ ಇತರೆಡೆಯೂ ಮುಂದುವರೆದ ವರುಣನ ಆರ್ಭಟ!

ನಗರದ ದಕ್ಷಿಣ ಭಾಗದಲ್ಲೂ ಹೆಚ್ಚು ಮಳೆಯಾಗುತ್ತಿದ್ದು, ಜಯನಗರ, ಜೆಪಿ ನಗರ, ತ್ಯಾಗರಾಜನಗರ ಸೇರಿದಂತೆ ಹಲವೆಡೆ ವರುಣನ ಆರ್ಭಟ ಜೋರಾಗಿದೆ. ಸತತ ಮೂರು ಗಂಟೆಗಳಿಂದ ಸುರಿಯುತ್ತಿರುವ ಮಳೆಯಿಂದ ಜನ ಆತಂಕಿತರಾಗಿರುವುದು ಸುಳ್ಳಲ್ಲ.

ಇನ್ನು ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಅವಾಂತರಗಳು ನಡೆದಿದ್ದು, ಕತ್ತಲಾದ ಪರಿಣಾಮವಾಗಿ ವಾಹನಗಳು ತಗ್ಗು ಪ್ರದೇಶಗಳಲ್ಲಿ ಮುಂದಕ್ಕೆ ಸಾಗಲಾರದೇ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.

ವಾಹನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಟ್ರಾಫಿಕ್ ಪೊಲೀಸರು ಹರಸಾಹಸಪಡುತ್ತಿದ್ದು, ಮಳೆಯನ್ನೂ ಲೆಕ್ಕಿಸದೇ ಕರ್ತವ್ಯನಿರತವಾಗಿರುವ ದೃಶ್ಯ ಸಾಮಾನ್ಯವಾಗಿದೆ.

ಉತ್ತರ ಕರ್ನಾಟಕದಲ್ಲಿ ಮತ್ತೆ 3 ದಿನ ಭಾರೀ ಮಳೆ..? ಜನರಲ್ಲಿ ಮತ್ತಷ್ಟು ಹೆಚ್ಚಿದ ಪ್ರವಾಹ ಭೀತಿ

ಭಾರೀ ಮಳೆಯ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರರು ತೊಂದರೆಗೀಡಾಗಿದ್ದು, ಪ್ರಮುಖ ರಸ್ತೆಗಳಲ್ಲಿ ವಾಹನ ಓಡಿಸಲಾಗದೇ ಪರದಾಡುತ್ತಿರುವ ದೃಶ್ಯ ಕೂಡ ಸಾಮಾನ್ಯವಾಗಿದೆ.

ಹವಾಮಾನ ಇಲಾಖೆಯ ಮಳೆ ನಕ್ಷೆ


ಸದ್ಯ ಹವಾಮಾನ ಇಲಾಖೆ ಪ್ರಕಟಿಸಿರುವ ಮಳೆ ನಕ್ಷೆಯ ಪ್ರಕಾರ ದೇಶದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರಮುಖವಾಗಿ ಬೆಂಗಳೂರು, ಹೈದರಾಬಾದ್, ಚೆನ್ನೈ ಸೇರಿದಂತೆ ಹಲವು ಪ್ರಮುಖ ನಗರಗಳು ವರುಣನ ಆರ್ಭಟಕ್ಕೆ ಸಿಕ್ಕು ನಲುಗುತ್ತಿವೆ. ಈ ನಲುಗುವಿಕೆ ಇನ್ನೂ ಎರಡು ದಿನಗಳ ಕಾಲ ಮುಂದುವರೆಯಲಿದೆ ಎಂಬುದೇ ಜನರ ಆತಂಕಕ್ಕೆ ಕಾರಣವಾಗಿದೆ.

ಇನ್ನು ರಾಜ್ಯದ ಇತರ ಭಾಗಗಳಲ್ಲೂ ಮಳೆ ಸುರಿಯುತ್ತಿದ್ದು, ಪ್ರಹಾದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆ ಮತ್ತೆ ಸುರಿಯುತ್ತಿರುವ ಮಳೆ ಕಂಡು ಆತಂಕಕ್ಕೆ ಒಳಗಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ